BANTWAL
ಟ್ರಕ್ ಆಟೋರಿಕ್ಷಾ ನಡುವಿನ ಅಪಘಾತದಲ್ಲಿ ಕಾಲು ಮುರಿಸಿಕೊಂಡ ಆಟೋ ಚಾಲಕ..!
ಬಂಟ್ವಾಳ: ಮರ ಸಾಗಿಸುತ್ತಿದ್ದ ಟ್ರಕ್ ಮತ್ತು ಆಟೋರಿಕ್ಷಾ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಚಾಲಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಭಾನುವಾರ ರಾತ್ರಿ ಬಂಟ್ವಾಳದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ.
ಪೊಳಲಿ ಬೆಳಂದೂರು ನಿವಾಸಿ ರಿಕ್ಷಾ ಚಾಲಕ ಚೇತನ್ ಗಾಯಗೊಂಡ ವ್ಯಕ್ತಿಯಾಗಿದ್ದಾನೆ. ಚೇತನ್ ಬಡ್ಡಕಟ್ಟೆಯಿಂದ ಜಕ್ರಿಬೆಟ್ಟು ಕಡೆಗೆ ಹೋಗುತ್ತಿದ್ದ ವೇಳೆ ಬಂಟ್ವಾಳ ಜಕ್ರಿಬೆಟ್ಟು ಪಂಪ್ ಹೌಸ್ ಮುಂದೆ ಬಂಟ್ವಾಳ ಪೇಟೆಯಿಂದ ಹೆದ್ದಾರಿಗೆ ಕ್ರಾಸ್ ಮಾಡುವ ವೇಳೆ ಬೆಳ್ತಂಗಡಿ ಕಡೆಯಿಂದ ಮರದ ದಿಮ್ಮಿಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂ ಗೊಂಡಿದೆ.ಆದರೆ ಚಾಲಕ ಚೇತನ್ ಅವರ ಕಾಲಿಗೆ ಬಲವಾದ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿದ್ದಾರೆ.
You must be logged in to post a comment Login