Connect with us

    LATEST NEWS

    ಚಲಿಸುತ್ತಿದ್ದ ಆಟೋದಲ್ಲಿ ಚಾಲಕನಿಗೆ ಹೃದಯಾಘಾತ….!!

    ಮಂಗಳೂರು ಡಿಸೆಂಬರ್ 3: ಆಟೋ ಚಲಿಸುತ್ತಿರುವ ವೇಳೆಯೇ ಹೃದಯಾಘಾತಕ್ಕೆ ಒಳಗಾಗಿ ಆಟೋ ಚಾಲಕ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ನೇತ್ರಾವತಿ ಸೇತುವೆಯಲ್ಲಿ ನಡೆದಿದೆ. ಮೃತರನ್ನ ಚೊಕ್ಕಬೆಟ್ಟು ನಿವಾಸಿ ಮುಹಮ್ಮದ್ ಹನೀಫ್ (46) ಎಂದು ಗುರುತಿಸಲಾಗಿದೆ. ಸವಾರಿಯನ್ನು ಕೂರಿಸಿಕೊಂಡು ಬಾಡಿಗೆಗೆ ತೆರಳುತ್ತಿದ್ದ ವೇಳೆ ಈ ಘಟನೆ ಸಂಭವಿಸಿದೆ.


    ಆಟೋ ರಿಕ್ಷಾ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಪ್ಪಿನಮೊಗರು ತಲುಪಿದಾಗ ಚಾಲಕ ಹನೀಫ್ ರಿಗೆ ಕಣ್ಣು ಮಂಜಾದಂತಾಗಿದ್ದು, ರಿಕ್ಷಾ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಈ ವೇಳೆ ಸಾರ್ವಜನಿಕರು ಹನೀಫ್ ರನ್ನು ಆರೈಕೆ ಮಾಡಿದ್ದರು. ಬಳಿಕ ಸುಧಾರಿಸಿಕೊಂಡ ಅವರು ರಿಕ್ಷಾ ಚಲಾಯಿಸಿಕೊಂಡು ಅಲ್ಲಿಂದ ಸ್ವಲ್ಪ ಮುಂದಕ್ಕೆ ಹೋದರೂ ನೇತ್ರಾವತಿ ಸೇತುವೆ ತಲುಪಿದಾಗ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply