DAKSHINA KANNADA
ಆಟೋರಿಕ್ಷಾಕ್ಕೆ ಎಟಿಎಂ ಹಣಸಾಗಾಟದ ವಾಹನ ಡಿಕ್ಕಿ – ಆಟೋ ಚಾಲಕ ಸ್ಥಳದಲ್ಲೇ ಸಾವು
ಉಪ್ಪಿನಂಗಡಿ ನವೆಂಬರ್ 29: ಆಟೋ ರಿಕ್ಷಾ ಒಂದಕ್ಕೆ ಎಟಿಎಂ ಗೆ ಹಣಸಾಗಿಸುವ ವಾಹನ ಡಿಕ್ಕಿಯಾದ ಪರಿಣಾಮ ಆಟೋಚಾಲಕ ಸ್ಥಳದಲ್ಲೇ ಸಾವನಪ್ಪಿರುವ ಘಟನೆ 34 ನೆಕ್ಕಿಲಾಡಿ ಗ್ರಾಮದ ಬೊಳ್ಳಾರು ಎಂಬಲ್ಲಿ ಇಂದು ಸಂಜೆ ನಡೆದಿದೆ.
ಮೃತ ಆಟೋ ಚಾಲಕನನ್ನು 34 ನೆಕ್ಕಿಲಾಡಿ ಗ್ರಾಮದ ಸುಭಾಶ್ ನಗರ ನಿವಾಸಿ ವಾಸು ಪೂಜಾರಿ ಎಂದು ಗುರುತಿಸಲಾಗಿದೆ. ಇವರು ಉಪ್ಪಿನಂಗಡಿ ಕಡೆಗೆ ಆಟೊರಿಕ್ಷಾದಲ್ಲಿ ಬರುತ್ತಿದ್ದ ಸಂದರ್ಭ ಉಪ್ಪಿನಂಗಡಿಯಿಂದ ಬಿ.ಸಿ.ರೋಡು ಕಡೆಗೆ ಹೋಗುತ್ತಿದ್ದ ಎಟಿಎಂ ಹಣ ಸಾಗಾಟದ ವಾಹನ ಇವರ ರಿಕ್ಷಾಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಗಂಭೀರ ಗಾಯಗೊಂಡ ವಾಸು ಪೂಜಾರಿ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಉಪ್ಪಿನಂಗಡಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You must be logged in to post a comment Login