Connect with us

BELTHANGADI

ಚಾಲಕನ ನಿಯಂತ್ರಣ ತಪ್ಪಿ ಮೃತ್ಯುಂಜಯ ನದಿಗೆ ಬಿದ್ದ ಆಟೋ – ಮಹಿಳೆ ಸಾವು

ಬೆಳ್ತಂಗಡಿ ಫೆಬ್ರವರಿ 04:ಚಾಲಕನ ನಿಯಂತ್ರಣ ತಪ್ಪಿದ ಆಟೊ ರಿಕ್ಷಾವೊಂದು ಮೃತ್ಯುಂಜಯ ನದಿಗೆ ಉರುಳಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಸಾವನಪ್ಪಿರುವ ಘಟನೆ ಮುಂಡಾಜೆ ಕಾಪು ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ. ಮೃತರನ್ನು ಕಕ್ಕಿಂಜೆ ಕತ್ತರಿ ಗುಡ್ಡೆ ನಿವಾಸಿ ಸಫಿಯಾ(57) ಮೃತ ಮಹಿಳೆ ಎಂದು ಗುರುತಿಸಲಾಗಿದೆ.


ರಾತ್ರಿ 11 ಗಂಟೆಗೆ ಮುಂಡಾಜೆಯಿಂದ ಕಕ್ಕಿಂಜೆ ಕಡೆಗೆ ಹೋಗುತ್ತಿದ್ದ ರಿಕ್ಷಾ, ಕಾಪು ಚಡಾವು ಹತ್ತಿರ ಚಾಲಕನ ನಿಯಂತ್ರಣ ಕಳೆದು ಕೊಂಡು ಮೃತ್ಯುಂಜಯ ನದಿಗೆ ಉರುಳಿ ಬಿದ್ದಿದೆ. ಕಿಂಡಿ ಅಣೆಕಟ್ಟುಗಳಲ್ಲಿ ನೀರು ನಿಂತಿರುವುದರಿಂದ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿತ್ತು ಎನ್ನಲಾಗಿದೆ.

ರಿಕ್ಷಾದಲ್ಲಿದ್ದ ಸಫಿಯಾ ಅವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಈ ವೇಳೆಗೆ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ರಿಕ್ಷಾದಲ್ಲಿದ್ದ ಇತರರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನೆಯ ಬಗ್ಗೆ ಧರ್ಮಸ್ಥಳದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Click to comment

You must be logged in to post a comment Login

Leave a Reply