Connect with us

LATEST NEWS

ಕೊಟ್ಟಾರ ಬಳಿ ರಾಜಕಾಲುವೆಗೆ ಬಿದ್ದ ಆಟೋರಿಕ್ಷಾ – ಚಾಲಕ ಸಾವು

ಮಂಗಳೂರು ಮೇ 25: ಮಂಗಳೂರಿನಲ್ಲಿ ಮುಂಗಾರು ಪೂರ್ವ ಮಳೆಯಾಗುತ್ತಿದ್ದು, ನಿನ್ನೆ ರಾತ್ರಿ ಎಡಬಿಡದೆ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಉಕ್ಕಿ ಹರಿಯುತ್ತಿದ್ದ ರಾಜಕಾಲುವೆಗೆ ಆಟೋ ರಿಕ್ಷಾವೊಂದು ಉರುಳಿ ಬಿದ್ದ ಕಾರಣ ರಿಕ್ಷಾಚಾಲಕ ಸಾವನಪ್ಪಿದ ಘಟನೆ ಕೊಟ್ಟಾರದ ಅಬ್ಬಕ್ಕ ನಗರದಲ್ಲಿ ಶುಕ್ರವಾರ ರಾತ್ರಿ ನಡೆದಿದೆ.


ಮೃತರನ್ನು ಅಟೋ ಚಾಲಕ ದೀಪಕ್ (40) ಎಂದು ಗುರುತಿಸಲಾಗಿದೆ. ಮುಂಗಾರು ಪೂರ್ವ ಮಳೆ ಕರಾವಳಿಯಲ್ಲಿ ಅಬ್ಬರಿಸುತ್ತಿದ್ದು, ಶುಕ್ರವಾರ ರಾತ್ರಿ ಎಡೆಬಿಡದೆ ಮಳೆ ಸುರಿದಿದೆ. ಹೀಗಾಗಿ ಕೊಟ್ಟಾರದಲ್ಲಿದ್ದ ರಾಜಕಾಲುವೆ ತುಂಬಿ ಹರಿದಿದ್ದು, ರಸ್ತೆ ಹಾಗೂ ರಾಜಕಾಲುವೆ ನಡುವೆ ವ್ಯತ್ಯಾಸ ತಿಳಿಯದಷ್ಟು ನೀರು ನಿಂತಿತ್ತು. ರಾತ್ರಿ ವೇಳೆ ಆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಆಟೋ ರಾಜಕಾಲುವೆಗೆ ಉರುಳಿದ್ದು, ಚಾಲಕ ನೀರಿನಲ್ಲಿ ಮುಳುಗಿ ಚಾಲಕ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಸ್ಥಳೀಯರು ಹಾಗೂ ದಾರಿಹೋಕರು ಮೃತದೇಹ ಮೇಲೆತ್ತಿದ್ದಾರೆ.
ಕಾಲುವೆಗೆ ತಡೆಗೋಡೆ ನಿರ್ಮಿಸದೇ ಇರುವುದು ಭಾರೀ ಅನಾಹುತಕ್ಕೆ ಕಾರಣವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *