LATEST NEWS
ಬಾಬ್ರಿ ಮಸೀದಿ ಧ್ವಂಸ ಪ್ರಕರಣ – ಕೋರ್ಟ್ ತೀರ್ಪನ್ನು ಸ್ವಾಗತಿಸಿದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ
ಉಡುಪಿ ಸೆಪ್ಟೆಂಬರ್ 30: ಬಾಬ್ರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಸೇರಿದಂತೆ ಎಲ್ಲಾ ನಾಯಕರುಗಳನ್ನು ದೋಷಮುಕ್ತ ಗೊಳಿಸಿದ ತೀರ್ಪನ್ನು ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಸ್ವಾಗತಿಸಿದ್ದಾರೆ.
ಸಿಪಿಐ ಕೋರ್ಟ್ ಆದೇಶದಿಂದ ನಮಗೆ ಬಹಳ ಸಂತೋಷವಾಗಿದ್ದು, ಧಾರ್ಮಿಕ, ಸಾಮಾಜಿಕ ನಾಯಕರು ಆರೋಪದಿಂದ ಮುಕ್ತರಾಗಿದ್ದಾರೆ. ಸತ್ಯಮೇವ ಜಯತೆ ಎಂಬ ಮಾತು ನಿಜವಾಗಿದೆ. ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಉಳಿಗಾಲವಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
You must be logged in to post a comment Login