LATEST NEWS
ನಾಲ್ಕು ವರ್ಷದ ಮಗುವಿನ ಮೇಲೆ ಹರಿದ ಟ್ಯಾಂಕರ್
ಮಂಗಳೂರು, ನವೆಂಬರ್ 30: ರಸ್ತೆ ದಾಟುತ್ತಿದ್ದ ಮಗುವಿನ ಮೇಲೆ ಟ್ಯಾಂಕರ್ ಹರಿದ ಘಟನೆ ಉಳ್ಳಾಲಬೈಲ್ನಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಮಗುವನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಉತ್ತರ ಪ್ರದೇಶ ಮೂಲದ ಹಾಗೂ ಉಳ್ಳಾಲಬೈಲ್ ಪ್ರದೇಶದಲ್ಲಿ ವಾಸವಾಗಿರುವ ಕುಟುಂಬದ ನಾಲ್ಕು ವರ್ಷದ ಕೃಷ್ಣ ಎಂಬ ಮಗು ಗಂಭೀರ ಸ್ಥಿತಿಯಲ್ಲಿದೆ ಎಂದು ತಿಳಿದುಬಂದಿದೆ. ಉಳ್ಳಾಲಬೈಲ್ನಲ್ಲಿ ಸಂಜೆ 6:30ರ ಸುಮಾರಿಗೆ ತಾಯಿ ಸಹಿತ ಮಕ್ಕಳು ರಸ್ತೆ ದಾಟುತ್ತಿದ್ದರು. ಈ ವೇಳೆ ತೊಕ್ಕೊಟ್ಟಿನಿಂದ ಉಳ್ಳಾಲ ಕಡೆಗೆ ತೆರಳಿದ್ದ ನೀರಿನ ಟ್ಯಾಂಕರ್ ಢಿಕ್ಕಿ ಹೊಡೆದಿದ್ದು, ಬಳಿಕ ಮಗುವಿನ ಮೇಲೆ ಟ್ಯಾಂಕರ್ ಹರಿದಿದೆ. ಉತ್ತರ ಪ್ರದೇಶ ಮೂಲದ ದಂಪತಿಯ ಐವರು ಮಕ್ಕಳಲ್ಲಿ ಕೊನೆಯ ಕಾರ್ತಿಕ್ ಮತ್ತು ಕೃಷ್ಣ ಎಂಬ ಮಕ್ಕಳು ಅವಳಿ-ಜವಳಿ. ಗಾಯಾಳು ಮಗುವಿನ ಎರಡೂ ಕಾಲುಗಳು ಜಖಂಗೊಂಡಿವೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
Facebook Comments
You may like
-
ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಕೊಳೆತ ಭ್ರೂಣದ ಅವಶೇಷ ಪತ್ತೆ..!!
-
ಬಿಯರ್ ತುಂಬಿದ್ದ ಲಾರಿ ಪಲ್ಟಿ…ಬಿಯರ್ ಬಾಟಲ್ ಗಳಿಗೆ ಮುಗಿಬಿದ್ದ ಮದ್ಯಪ್ರಿಯರು
-
ಗೂಗಲ್ ಮ್ಯಾಪ್ ನಂಬಿ ಗಲ್ಲಿಗೆ ನುಗ್ಗಿದ ಬಸ್ – 11 ಕೆವಿ ವಿದ್ಯುತ್ ತಂತಿ ತಗುಲಿ 11 ಮಂದಿ ಸಜೀವ ದಹನ
-
ಧಾರವಾಡ ಭೀಕರ ರಸ್ತೆ ಅಪಘಾತಕ್ಕೆ 11 ಮಂದಿ ಸಾವು
-
5ತಿಂಗಳ ಮಗುವಿನೊಂದಿಗೆ ಬೆತ್ತಲಾಗಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ!?
-
ಗುಜ್ಜಾಡಿ ರಸ್ತೆ ಅಪಘಾತ ಪತ್ರಿಕಾ ವಿತರಕ ಅಶೋಕ್ ಕೊಡಂಚ ಸಾವು
You must be logged in to post a comment Login