Connect with us

    DAKSHINA KANNADA

    ಕೆಂಪುಕಲ್ಲಿನ ಅಟ್ಟಿ ಬಿದ್ದು ಮೂರುವರೆ ವರ್ಷದ ಮಗು ಸಾವು

    ಉಪ್ಪಿನಂಗಡಿ ಮಾರ್ಚ್ 01: ಕಟ್ಟಡ ನಿರ್ಮಾಣಕ್ಕೆಂದು ಮನೆಯಂಗಳದಲ್ಲಿ ಇಟ್ಟಿದ್ದ ಕೆಂಪುಕಲ್ಲಿನ ಅಟ್ಟಿ ಮಗುವಿನ ಮೇಲೆ ಬಿದ್ದು ಮೂರುವರೆ ವರ್ಷದ ಮಗು ಸಾವನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾಮದ ಬಾಯ್ತಾರು ಎಂಬಲ್ಲಿ ನಡೆದಿದೆ.

    ಸಾಂದರ್ಭಿಕ ಚಿತ್ರ

    ಅಶ್ರಫ್ ಮತ್ತು ಸಮೀಮಾ ದಂಪತಿಯ ಮಗ ಮೊಹಮ್ಮದ್ ನೌಶೀರ್ ಮೃತ ಮಗು. ಕಟ್ಟಡ ನಿರ್ಮಾಣಕ್ಕೆ೦ದು ಮನೆಯಂಗಳದಲ್ಲಿ ತಂದಿರಿಸಲಾಗಿದ್ದ ಕೆಂಪು ಕಲ್ಲಿನ ಅಟ್ಟಿಯ ಬಳಿ ಮಗು ನೌಶೀರ್ ಆಟವಾಡುತ್ತಿದ್ದ ವೇಳೆ ಕಲ್ಲಿನ ಅಟ್ಟಿಯು ಮಗುಚಿ ಆತನ ಮೇಲೆಯೇ ಬಿದ್ದಿತ್ತು ಎಂದು ಹೇಳಲಾಗಿದೆ.

    ಮಗು ಕಾಣದೆ ಇದ್ದಾಗ ಹುಡುಕಾಟ ನಡೆಸಿದರು.ಈ ವೇಳೆ ಅಂಗಳದಲ್ಲಿಟ್ಟಿದ್ದ ಕಲ್ಲಿನ ಅಟ್ಟಿಯು ಬಿದ್ದಿರುವುದನ್ನು ಕಂಡು ಅಲ್ಲಿ ಶೋಧಿಸಿದಾಗ ಮಗು ಕಲ್ಲಿನ ಅಡಿಯಲ್ಲಿ ಸಿಲುಕಿ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿರುವುದು ಕ೦ಡು ಬಂದಿತ್ತು.

     

    Share Information
    Advertisement
    Click to comment

    You must be logged in to post a comment Login

    Leave a Reply