Connect with us

    KARNATAKA

    ಶ್ರೀರಂಗ ಪಟ್ಟಣ -ಐಸ್ಕ್ರೀಂ ತಿಂದು ಅವಳಿ ಮಕ್ಕಳ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ – ಮಕ್ಕಳಿಗೆ ವಿಷ ಉಣಿಸಿದ ತಾಯಿ

    ಮಂಡ್ಯ ಎಪ್ರಿಲ್ 18: ಐಸ್ಕ್ರೀಂ ತಿಂದು ಇಬ್ಬರು ಅವಳಿ ಮಕ್ಕಳು ಸಾವನಪ್ಪಿದ ಘಟನೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ತಾಯಿಯೇ ತನ್ನ ಮೂವರು ಮಕ್ಕಳಿಗೆ ವಿಷವುಣಿಸಿದ್ದು, ಅದರಲ್ಲಿ ಇಬ್ಬರು ಮಕ್ಕಳಿ ಸಾವನಪ್ಪಿದ್ದಾರೆ.


    ಪೂಜಾ ಮತ್ತು ಪ್ರಸನ್ನ ದಂಪತಿಗಳ ಒಂದೂವರೆ ವರ್ಷದ ತ್ರಿಶುಲ್ ಹಾಗೂ ತ್ರಿಶಾ ಸಾವನ್ನಪ್ಪಿದ ಮಕ್ಕಳು. ನಿನ್ನೆ ಮಧ್ಯಾಹ್ನ ತಳ್ಳುವ ಗಾಡಿಯಲ್ಲಿ ಐಸ್ ಕ್ರೀಂ ತೆಗೆದುಕೊಂಡು ತಾಯಿ ಪೂಜಾ ಸೇರಿದಂತೆ ಇಬ್ಬರು ಮಕ್ಕಳು ಕೂಡ ಸೇವಿಸಿದ್ದಾರೆ. ಆ ನಂತರ ಮಕ್ಕಳು ಅಸ್ವಸ್ಥರಾಗಿದ್ದರು ಎಂದು ಆರೋಪಿಸಲಾಗಿತ್ತು. ಇದೀಗ ತಾಯಿಯೇ ವಿಷ ಹಾಕಿರುವುದು ವಿಚಾರಣೆ ಬಳಿಕ ತಿಳಿದು ಬಂದಿದೆ.

    ಘಟನೆ ಕುರಿತು ಪೊಲೀಸ್​ ವಿಚಾರಣೆ ಬಳಿಕ ಸತ್ಯಾಂಶ ಬಯಲಾಗಿದ್ದು, ತಾಯಿಯೇ ಕೌಟುಂಬಿಕ ಕಲಹದಿಂದ ಮೂರು ಮಕ್ಕಳಿಗೆ ವಿಷ ಉಣಿಸಿರುವುದು ಬಯಲಾಗಿದೆ. ಪೂಜಾ ಪತಿ ಪ್ರಸನ್ನ ಜೊತೆ ಪದೇ ಪದೇ ಜಗಳವಾಡುತ್ತಿದ್ದರು. ಮನೆಯಲ್ಲಿ ಜಗಳ ವಿಕೋಪಕ್ಕೆ ತಿರುಗಿದ್ದು, ಜಗಳದಿಂದ ಬೇಸತ್ತು ನಿನ್ನೆ ಮಕ್ಕಳಿಗೆ ತಾಯಿ ವಿಷ ಉಣಿಸಿದ್ದಾರೆ. ಬಳಿಕ ತಾನೂ ಸೇವಿಸಿದ್ದಳು, ಕೂಡಲೇ ಮಕ್ಕಳು ಹಾಗೂ ಪೂಜಾಳನ್ನು ಮಂಡ್ಯ‌ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿ, ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಕೊನೆಯುಸಿರೆಳೆದಿದ್ದವು. ತಾಯಿ‌ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ಮುಂದುವರಿದೆ.

    Share Information
    Advertisement
    Click to comment

    You must be logged in to post a comment Login

    Leave a Reply