LATEST NEWS
ಫಾಝಿಲ್ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು
ಮಂಗಳೂರು ಸೆಪ್ಟೆಂಬರ್ 16: ಸುರತ್ಕಲ್ ನಲ್ಲಿ ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿರುವ ಆರೋಪಿಗೆ ಜಾಮೀನು ದೊರೆತಿದೆ. ಫಾಝಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಹರ್ಷಿತ್ (28)ನಿಗೆ ಜಾಮೀನು ಲಭಿಸಿದೆ ಎಂದು ತಿಳಿದು ಬಂದಿದೆ.
ಜುಲೈ 28ರಂದು ನಡೆದ ಫಾಝಿಲ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಏಳು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಈ ವೇಳೆ ಆರೋಪಿಗಳಿಗೆ ಆಶ್ರಯ ನೀಡಿದ ಆರೋಪದಲ್ಲಿ ಎಂಟನೇ ಆರೋಪಿಯಾಗಿ ಹರ್ಷಿತ್ನನ್ನು ಬಂಧಿಸಲಾಗಿತ್ತು. ಬಳಿಕ ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದರು. ಮಂಗಳೂರಿನ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯ ಜಾಮೀನು ನೀಡಿದೆ.
You must be logged in to post a comment Login