Connect with us

    LATEST NEWS

    ಹಿಂಜಾವೇ ಮುಖಂಡ ಜಗದೀಶ್ ಕಾರಂತಗೆ ಜಾಮೀನು

    ಹಿಂಜಾವೇ ಮುಖಂಡ ಜಗದೀಶ್ ಕಾರಂತಗೆ ಜಾಮೀನು

    ಪುತ್ತೂರು. ಅಕ್ಟೋಬರ್ 7: ಪುತ್ತೂರು ಸಂಪ್ಯ ಎಸ್.ಐ ವಿರುದ್ಧ ಅವಹೇಳನಕಾರಿ ಹೇಳಿಕೆ ಹಾಗೂ ಇತರ ಕಾಯ್ದೆಯಡಿ ಬಂಧಿಸಲ್ಪಟ್ಟಿದ್ದ ಹಿಂದೂ ಜಾಗರಣ ವೇದಿಕೆಯ ಮುಖಂಡ ಜಗದೀಶ್ ಕಾರಂತರಿಗೆ ಪುತ್ತೂರು ನ್ಯಾಯಾಲಯವು ಜಾಮೀನು ನೀಡಿ ಆದೇಶ ಹೊರಡಿಸಿದೆ.
    ಸೆಪ್ಟೆಂಬರ್15 ರಂದು ಪುತ್ತೂರಿನಲ್ಲಿ ನಡೆದಿದ್ದ ಪ್ರತಿಭಟನಾ ಸಭೆಯಲ್ಲಿ ಜಗದೀಶ್ ಕಾರಂತ್ ಸಂಪ್ಯ ಠಾಣೆಯ ಎಸ್.ಐ ವಿರುದ್ಧ ಅವಹೇಳನಕಾರಿ ಮಾತನಾಡಿದ್ದರು.

    ಈ ಸಂಬಂಧ ಪುತ್ತೂರು ನಗರ ಪೋಲೀಸರು ಕಾರಂತ್ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿದ್ದರು. ಈ ಹಿನ್ನಲೆಯಲ್ಲಿ ಜಗದೀಶ್ ಕಾರಂತರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ದಕ್ಷಿಣಕನ್ನಡ ಜಿಲ್ಲಾ ಅಪರಾಧ ಪತ್ತೆ ದಳದ ಪೋಲೀಸರು ವಶಕ್ಕೆ ಪಡೆದಿದ್ದರು. ನಂತರ ಮಧ್ಯಂತರ ಜಾಮೀನ ಮೇಲೆ ಬಿಡುಗಡೆಯಾಗಿದ್ದರು.

    ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಪುತ್ತೂರು ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶ ಸಿ.ಕೆ ಬಸವರಾಜ್ ಅವರು ಹಿಂದೂ ಜಾಗರಣ ವೇದಿಕೆ ಮುಖಂಡ ಜಗದೀಶ್ ಕಾರಂತರಿಗೆ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply