Connect with us

LATEST NEWS

ಉಡುಪಿ ಟಿಪ್ಪು ಜಯಂತಿಗೆ ಪ್ರತಿಭಟನೆ ಬಿಸಿ- ಬಜರಂಗದಳ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು

ಉಡುಪಿ ಟಿಪ್ಪು ಜಯಂತಿಗೆ ಪ್ರತಿಭಟನೆ ಬಿಸಿ- ಬಜರಂಗದಳ ಕಾರ್ಯಕರ್ತರ ವಶಕ್ಕೆ ಪಡೆದ ಪೊಲೀಸರು

ಉಡುಪಿ ನವೆಂಬರ್ 10: ಮಣಿಪಾಲ ರಜಾತಾದ್ರಿಯ ವಾಜಪೇಯಿ ಸಭಾಂಗಣದಲ್ಲಿ ಟಿಪ್ಪು ಜಯಂತಿ ಆಚರಣೆ ನಡೆಸಲಾಯಿತು. ಜಿಲ್ಲೆಯ ಎಲ್ಲಾ ಐವರು ಬಿಜೆಪಿ ಶಾಸಕರು ಕಾರ್ಯಕ್ರಮಕ್ಕೆ ಗೈರು ಹಾಜಾರಾಗಿದ್ದರು. ಅಲ್ಲದೆ ಸಂಸದೆ ಶೋಭಾ ಕೆರಂದ್ಲಾಜೆ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಕೂಡ ಗೈರು ಹಾಜರಾಗಿದ್ದರು.

ಈ ನಡುವೆ ಬಜರಂಗದಳ ಕಾರ್ಯಕರ್ತರು ಟಿಪ್ಪು ಜಯಂತಿ ಆಚರಣೆ ಗೆ ಅಡ್ಡಿಪಡಿಸಲು ಯತ್ನಿಸಿದ್ದರು. ಜಿಲ್ಲಾಧಿಕಾರಿ ಕಚೇರಿಯ ಸುಮಾರು ಐನೂರು ಮೀಟರ್ ದೂರದಲ್ಲೇ ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಕೆಲವು ಕಾರ್ಯಕರ್ತರು ಜಿಲ್ಲಾ ಪಂಚಾಯತ್ ಸಭಾಂಗಣ ಕ್ಕೆ ನುಗ್ಗಲು ಯತ್ನಿಸಿದ್ದರು ಅವರನ್ನು ವಶಕ್ಕೆ ಪಡೆದು ಪೊಲೀಸ್ ಬಸ್ ನಲ್ಲಿ ಕರೆದೊಯ್ದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *