Connect with us

    KARNATAKA

    ಮುಸಲ್ಮಾನ ಗೂಂಡಾಗಳಿಂದ ಭಜರಂಗದಳ ಕಾರ್ಯಕರ್ತನ ಕೊಲೆ – ಸಚಿವ ಈಶ್ವರಪ್ಪ

    ಶಿವಮೊಗ್ಗ ಫೆಬ್ರವರಿ 21: ಶಿವಮೊಗ್ಗ ಜಿಲ್ಲೆಯಲ್ಲಿ ಭಜರಂಗದಳದ ಕಾರ್ಯಕರ್ತನ ಭೀಕರ ಹತ್ಯೆ ನಡೆದಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಈ ಕೊಲೆಗೆ ಮುಸ್ಲಿಂ ಗೂಂಡಾಗಳೇ ಕಾರಣ ಎಂದು ಸಚಿವ ಈಶ್ವರಪ್ಪ ಆರೋಪಿಸಿದ್ದಾರೆ.


    ಭಜರಂಗದಳ ಕಾರ್ಯಕರ್ತ ಹರ್ಷ ಎಂಬ ಯುವಕನನ್ನು ಕಳೆದ ರಾತ್ರಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದೆ. ನಿನ್ನೆ ಭಾನುವಾರ ರಾತ್ರಿ 10 ಗಂಟೆ ಸುಮಾರು. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ತವರು ಜಿಲ್ಲೆ ಶಿವಮೊಗ್ಗದ ತೀರ್ಥಹಳ್ಳಿಗೆ ಹೋಗುವ ರಸ್ತೆ ಪಕ್ಕದ ಭಾರತಿ ಕಾಲೊನಿ ಬಡಾವಣೆಯಲ್ಲಿ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದರು.


    ಕಾರಿನಲ್ಲಿ ಬಂದಿದ್ದ 4ರಿಂದ 6 ಜನರ ಗುಂಪು, ಭಜರಂಗದಳ ಕಾರ್ಯಕರ್ತ ಹರ್ಷ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಹರ್ಷ ರಸ್ತೆಯಲ್ಲೇ ಬಿದ್ದು ಒದ್ದಾಡುತ್ತಿದ್ದ. ಕೂಡಲೇ ಯುವಕನನ್ನು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿಸಿತಾದರೂ ಚಿಕಿತ್ಸೆ ಫಲಿಸದೇ ಹರ್ಷ ಪ್ರಾಣಬಿಟ್ಟಿದ್ದಾನೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ(ಸಿಆರ್‌ಪಿಸಿ ಸೆಕ್ಷನ್‌ 144) ಜಾರಿಗೊಳಿಸಲಾಗಿದೆ.

     

    ಮುಸಲ್ಮಾನ ಗೂಂಡಾಗಳಿಂದ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ. ನಮ್ಮ ಸಜ್ಜನ ಕಾರ್ಯಕರ್ತನ ಕೊಲೆ ಆಗಿದೆ. ಮುಸಲ್ಮಾನ ಗೂಂಡಾಗಳಿಂದ ಈ ಕೊಲೆ ನಡೆದಿದೆ. ಶಿವಮೊಗ್ಗದಲ್ಲಿ ಈ ಮುಸಲ್ಮಾನ ಗೂಂಡಾಗಳು ಬಾಲ ಬಿಚ್ಚಿರಲಿಲ್ಲ ಎಂದಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply