LATEST NEWS
ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾದ ಯುವಕ
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಜ್ಪೆ ಜನವರಿ 03: ಗುರುಪುರ ಫಲ್ಗುಣಿ ನದಿಯ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕನೊಬ್ಬ ನಾಪತ್ತೆಯಾಗಿರುವ ಘಟನೆ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.
ನಾಪತ್ತೆಯಾದ ಯುವಕನನ್ನು ಮಳಲಿ ಮಟ್ಟಿ ತಿಮ್ಮೊಟ್ಟು ನಿವಾಸಿ ಚೇತನ್ ಪೂಜಾರಿ ( 27) ಎಂದು ತಿಳಿದು ಬಂದಿದೆ. ಗುರುವಾರ ಸಂಜೆಯಿಂದ ಗುರುಪುರ ಫಲ್ಗುಣಿ ನದಿ ಸೇತುವೆಯಲ್ಲಿ ಬೈಕ್ ವೊಂದು ನಿಂತಿರುವ ಬಗ್ಗೆ ಬಜ್ಪೆ ಪೊಲೀಸರಿಗೆ ಮಾಹಿತಿ ಬಂದಿದೆ. ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಬೈಕ್ ವಶಕ್ಕೆ ಪಡೆದು ವಿಚಾರಣೆ ಆರಂಭಿಸಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ಈ ವೇಳೆ ಚೇತನ್ ಪೂಜಾರಿ ಗುರುವಾರದಿಂದ ನಾಪತ್ತೆಯಾಗಿರುವುದು ತಿಳಿದು ಬಂದಿದೆ. ಬಳಿಕ ಆತನ ಮನೆಯವರನ್ನು ಕೆರೆಸಿ ವಿಚಾರಿಸಿದಾಗ ಪತ್ತೆಯಾಗಿರುವ ಬೈಕ್ ಚೇತನ್ ಚಲಾಯಿಸಿಕೊಂಡು ಬಂದಿರುವುದು ಬೆಳಕಿಗೆ ಬಂದಿದೆ.
You must be logged in to post a comment Login