KARNATAKA
ಭದ್ರಾವತಿಯಲ್ಲಿ ಭಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ
ಶಿವಮೊಗ್ಗ, ಆಗಸ್ಟ್ 16: ಫ್ಲೆಕ್ಸ್ ವಿಚಾರಕ್ಕೆ ನಡೆಯುತ್ತಿರುವ ಕಿತ್ತಾಟ ಈಗ ಭದ್ರಾವತಿಗೆ ಬಂದಿದ್ದು, ನಗರದ ಭಜರಂಗದಳದ ಕಾರ್ಯಕರ್ತನ ಮೇಲೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ.
ಸುನೀಲ್ (25) ಮೇಲೆ ಇಂದು ಬೆಳಗ್ಗೆ 8:30ರ ವೇಳೆಗೆ ಭದ್ರಾವತಿಯ ನೆಹರು ನಗರದಲ್ಲಿ ಹಲ್ಲೆ ನಡೆಸಲಾಗಿದೆ. ಹಲ್ಲೆಗೊಳಗಾದ ಸುನೀಲ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಘಟನೆ ಸಂಬಂಧ ಭದ್ರಾವತಿ ಓಲ್ಡ್ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಜಾಗ್ರತಾ ಕ್ರಮವಾಗಿಯೇ ಭದ್ರಾವತಿಯಲ್ಲೂ 144 ಸೆಕ್ಷನ್ ನಿಷೇಧಾಜ್ಞೆ ಜಾರಿಯಾಗಿದೆ. ನಿಷೇಧಾಜ್ಞೆ ನಡುವೆಯೂ ನಾಲ್ವರು ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.
You must be logged in to post a comment Login