Connect with us

    DAKSHINA KANNADA

    ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮಿಯವರ 78 ನೇ ಜಯಂತೋತ್ಸವ

    ಪುತ್ತೂರು ಜನವರಿ 21: ಭೈರವೈಕ್ಯ ಬಾಲಗಂಗಾಧರನಾಥ ಸ್ವಾಮಿಯವರ 78 ನೇ ಜಯಂತೋತ್ಸವ ಕಾರ್ಯಕ್ರಮ ಜನವರಿ 22 ರಂದು ಪುತ್ತೂರಿನಲ್ಲಿ ನಡೆಯಲಿದೆ. ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ದಕ್ಷಿಣಕನ್ನಡ,ಉಡುಪಿ,ಕೊಡಗು ಭಾಗದ ಸುಮಾರು 1 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದ್ದು, ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ, ಹೆಚ್.ಡಿ.ಕುಮಾರಸ್ವಾಮಿ, ಕೆ‌.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ರಾಜ್ಯದ ಹಲವು ಸಚಿವರು,ಶಾಸಕರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

    ಭೈರವೈಕ್ಯ ಬಾಲಗಂಗಾಧರ ಮಹಾಸ್ವಾಮಿಗಳ ಜಯಂತ್ಯೋತ್ಸವ ಸವಿನೆನಪಿಗಾಗಿ ಕಡಬದ ಪರಿಯಡ್ಕದಲ್ಲಿ ನೂತನ ಬಿಜಿಎಸ್ ಆಂಗ್ಲ ಮಾಧ್ಯಮ ಶಾಲೆಗೆ ಶಿನಾನ್ಯಾಸ, ಪುತ್ತೂರಿನ ಮಹಾಲಿಂಗೇಶ್ವರ ಐಟಿಐ ನ ಹೊಸ ಸಭಾಂಗಣದ ಉದ್ಘಾಟನೆಯನ್ನೂ ನೆರವೇರಿಸಲಾಗುವುದು. ಕಾರ್ಯಕ್ರಮಕ್ಕೆ ಮೊದಲು ಮಹಾಸಂಸ್ಥಾನದ ನಿರ್ಮಲಾನಂದ ಸ್ವಾಮೀಜಿಯವರ ಪುರಪ್ರವೇಶ ಮತ್ತು ಕಾರ್ಯಕ್ರಮದಲ್ಲಿ ಸ್ವಾಮೀಜಿಗಳಿಗೆ ಬೆಳ್ಳಿಯ ತುಲಾಭಾರ ನಡೆಯಲಿದ್ದು, ದೇವಸ್ಥಾನದ ಗದ್ದೆಯಲ್ಲಿ ಕಾರ್ಯಕ್ರಮಕ್ಕಾಗಿ ಎಲ್ಲಾ ಸಿದ್ಧತೆಗಳನ್ನು ನಡೆಸಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply