Connect with us

    BANTWAL

    ಬಾಳ್ತಿಲ: ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆ

    ಬಂಟ್ವಾಳ, ಸೆಪ್ಟೆಂಬರ್ 22: ಬಾಳ್ತಿಲ ಗ್ರಾಮ ಪಂಚಾಯಿತಿ ಕಲ್ಪವೃಕ್ಷ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾ ಸಭೆ ಸೆ. 21 ರಂದು ಬಾಳ್ತಿಲ ಗ್ರಾಮ ಪಂಚಾಯತ್ ನ ಸುವರ್ಣ ಸೌಧ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ಕೆ. ಅಣ್ಣು ಪೂಜಾರಿ ಗೆಜ್ಜೆಗಿರಿ ಸಮ್ಮುಖದಲ್ಲಿ ನಡೆಯಿತು.

    ಈ ಸಭೆಯಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿ,ಒಕ್ಕೂಟದ ಅಧ್ಯಕ್ಷರು, ಉಪಾಧ್ಯಕ್ಷರು, ಕೋಶಧಿಕಾರಿ, ಕಾರ್ಯದರ್ಶಿ,ಗ್ರಾಮ ಪಂಚಾಯತ್ ಕಾರ್ಯದರ್ಶಿ, ತಾಲೂಕು ಪಂಚಾಯತ್ ನ NRLM ನ ವಲಯ ಮೇಲ್ವಿಚಾರಕಿ ಕುಸುಮ, ತಾಲೂಕು ಪಂಚಾಯತ್ ನ NRLM BRP ಸವಿತಾ ಹಾಗೂ ಆರೋಗ್ಯ ಕಾರ್ಯಕರ್ತೆ ಹಾಗೂ ಒಕ್ಕೂಟದ ಪದಾಧಿಕಾರಿಗಳು, ವಾರ್ಡಿನ ಅಧ್ಯಕ್ಷರು,ಕಾರ್ಯದರ್ಶಿ, ಕೋಶಾಧಿಕಾರಿ ಹಾಗೂ ಎಲ್ಲಾ ಸಂಘದ ಸದಸ್ಯರು, ಪಂಚಾಯತಿ ಸದಸ್ಯರು, ಹಾಗೂ ಪಂಚಾಯಿತಿ ಸಿಬ್ಬಂದಿಗಳು, ಒಕ್ಕೂಟದ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.

    ಇದೇ ಸಂದರ್ಭ ಒಕ್ಕೂಟದ ನೂತನ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು. ಅಧ್ಯಕ್ಷರಾಗಿ ಯಶೋಧ ,ಉಪಾಧ್ಯಕ್ಷರಾಗಿ ವಿದ್ಯಾ ,ಕಾರ್ಯದರ್ಶಿಯಾಗಿ ಚೈತ್ರ , ಜೊತೆ ಕಾರ್ಯದರ್ಶಿಯಾಗಿ ಶ್ಯಾಮಲ, ಕೋಶಾಧಿಕಾರಿಯಾಗಿ ನೀತಾ ಇವರನ್ನು ಆಯ್ಕೆ ಮಾಡಲಾಯಿತು.

    ಗ್ರಾಮ ಪಂಚಾಯತ್ ಸದಸ್ಯೆ ಜ್ಯೋತಿ ಸ್ವಾಗತಿಸಿದರು. ಗ್ರಾಮ ಪಂಚಾಯತ್ ಸದಸ್ಯೆ ಮಲ್ಲಿಕಾ ಇವರು ಧನ್ಯವಾದ ಸಲ್ಲಿಸಿದರು. ಗ್ರಾಮ ಪಂಚಾಯತ್ ಸದಸ್ಯ ವಿಠಲ್ ನಾಯ್ಕ ನಿರೂಪಿಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply