DAKSHINA KANNADA
PFI,KFD,SDPI ಸಂಘಟನೆಗಳನ್ನು ನಿಷೇಧಿಸಿ: ಬದ್ರಿನಾಥ್ ಕಾಮತ್
ಮಂಗಳೂರು, ಸೆಪ್ಟೆಂಬರ್ 04 : ಪಿಎಫ್ ಐ,ಕೆಎಫ್ ಡಿ ಮತ್ತು ಎಸ್ ಡಿ ಪಿ ಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ಬಿಜೆಪಿ ಪಕ್ಷದ ವತಿಯಿಂದ ನಗರದ ವಾರ್ಡ್ ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಬಿಜೆಪಿ ಕದ್ರಿ ದಕ್ಷಿಣ 33 ನೆ ವಾರ್ಡ್ ಆಶ್ರಯದಲ್ಲಿ ಮಂಗಳೂರಿನ ಮಲ್ಲಿಕಟ್ಟೆ ವೃತ್ತದಲ್ಲಿ ಆಯೋಜಿಸಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಬಿಜೆಪಿ ಕೈಗಾರಿಕಾ ಪ್ರಕೋಷ್ಟದ ಅಧ್ಯಕ್ಷ ಬದ್ರಿನಾಥ್ ಕಾಮತ್ ಅವರು ಜಿಲ್ಲೆಯಲ್ಲಿ ನಿರಂತರವಾಗಿ ಪಿಎಫ್ ಐ, ಕೆಎಫ್ ಡಿ ಮತ್ತು ಎಸ್ ಡಿ ಪಿ ಐ ಸಂಘಟನೆಗಳಿಂದ ಕೊಲೆ ಹಾಗೂ ಆಶಾಂತಿಯ ವಾತಾವರಣ ನಿರ್ಮಾಣವಾಗಿದೆ.
ಆದರೆ ಇದರ ಮೇಲೆ ಕ್ರಮ ಕೈಗೊಳ್ಳಬೇಕಾದ ರಾಜ್ಯ ಸರ್ಕಾರ ಮೌನವಾಗಿ ಕುಳಿತಿದೆ ಎಂದು ಆರೋಪಿಸಿದರು. ಇದಕ್ಕಾಗಿ ಪ್ರತಿಭಟನೆ ನಡೆಸಿ ಹಕ್ಕೊತ್ತಾಯ ಮಾಡಲು ಭಾರತೀಯ ಜನತಾ ಪಕ್ಷ ಮುಂದಾದರೆ ಅದನ್ನು ಹತ್ತಿಕ್ಕಲು ಯತ್ನಿಸುತ್ತಿದೆ ಎಂದು ಆರೋಪಿಸಿದರು. ಹಿಂದೂ ಕಾರ್ಯಕರ್ತರ ಹತ್ಯೆ ಹಾಗೂ ಹಲ್ಲೆಯ ಹಿಂದೆ ನೇರವಾಗಿ ಭಾಗಿಯಾಗಿರುವ ಪಿಎಫ್ಐ, ಕೆಎಫ್ ಡಿ ಹಾಗೂ ಎಸ್ ಡಿ ಪಿಐ ಸಂಘಟನೆಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿದರು.
You must be logged in to post a comment Login