Connect with us

LATEST NEWS

ತಾಯಿಯ ಅಂತ್ಯ ಸಂಸ್ಕಾರಕ್ಕೆ ಉಡುಪಿಗೆ ಆಗಮಿಸಿದ ಬನ್ನಂಜೆ ರಾಜಾ

ತಾಯಿಯ ಅಂತ್ಯ ಸಂಸ್ಕಾರಕ್ಕೆ ಉಡುಪಿಗೆ ಆಗಮಿಸಿದ ಬನ್ನಂಜೆ ರಾಜಾ

ಉಡುಪಿ ಅಗಸ್ಟ್ 27: ತಾಯಿಯ ಅಂತ್ಯಸಂಸ್ಕಾರಕ್ಕೆ ಭೂಗತ ಪಾತಕಿ ಬನ್ನಂಜೆ ರಾಜ ಉಡುಪಿ ಗೆ ಆಗಮಿಸಿದ್ದಾನೆ.

ಭೂಗತ ಪಾತಕಿ ಬನ್ನಂಜೆ ರಾಜಾ ನ ತಾಯಿ ವಿಲಾಸಿನಿ ಶೆಟ್ಟಿಗಾರ್ ಅವರು ಮೊನ್ನೆ ಉಡುಪಿಯ ಕಲ್ಮಾಡಿಯಲ್ಲಿರುವ ಮನೆಯಲ್ಲಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದರು.

ಈ ಹಿನ್ನಲೆಯಲ್ಲಿ ಬನ್ನಂಜೆ ರಾಜಾ ತಾಯಿಯ ಅಂತ್ಯ ಸಂಸ್ಕಾರಕ್ಕೆ ಉಡುಪಿಗೆ ಆಗಮಿಸಿದ್ದು ಇಂದು ನಡೆಯುವ ಅಂತ್ಯ ಸಂಸ್ಕಾರ ತೆರಳಲಿದ್ದಾರೆ.

ಸದ್ಯ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಬನ್ನಂಜೆ ರಾಜಾ ತಾಯಿಯ ಅಂತ್ಯಸಂಸ್ಕಾರಕ್ಕೆ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಿಂದ ವಿಶೇಷ ಅನುಮತಿ ಪಡೆದಿದ್ದಾರೆ.

ಈ ಹಿನ್ನಲೆಯಲ್ಲಿ ಬನ್ನಂಜೆ ರಾಜಾ ನ್ನು ಬೆಳಗಾವಿಯ ಹಿಂಡಲಗಾ ಜೈಲಿನಿಂದ ಇಂದು ಉಡುಪಿ ಹಾಗೂ ಚಿಕ್ಕಮಗಳೂರು ಪೊಲೀಸರು ಉಡುಪಿಗೆ ಕರೆ ತಂದಿದ್ದಾರೆ.

ಇಂದು ಉಡುಪಿಯ ಮಲ್ಪೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದ್ದು. ಪೊಲೀಸ್ ಸುಪರ್ಧಿಯಲ್ಲಿ ಬನ್ನಂಜೆ ರಾಜಾ ಅಂತ್ಯ ಸಂಸ್ಕಾರಕ್ಕೆ ತೆರಳಲಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *