Connect with us

BANTWAL

ಬಂಟ್ವಾಳ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ ಮತ್ತೆ ಇಬ್ಬರು ಪೊಲೀಸ್ ವಶಕ್ಕೆ

ಮಂಗಳೂರು ಮೇ 31: ಬಂಟ್ವಾಳದಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.


ಬಂಟ್ವಾಳ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಮೇ 27ರಂದು ನಡೆದ ಅಬ್ದುಲ್‌ ರಹಿಮಾನ್‌ ಯಾನೆ ರಹೀಂ ಕೊಲೆ ಮತ್ತು ಅವರ ಜತೆಯಿದ್ದ ಕಲಂದರ್‌ ಶಾಫಿ ಮೇಲೆ ನಡೆದ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದರು. ಶುಕ್ರವಾರ ಮತ್ತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ತೆಂಕಬೆಳ್ಳುರು ಗ್ರಾಮದ ಸುಮಿತ್ ಆಚಾರ್ಯ (27), ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23)ನನ್ನು ವಶಕ್ಕೆ ಪಡೆದಿರುವ ಪೊಲೀಸರು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು,ತನಿಖೆ ಮುಂದುವರಿದಿದೆ ಎಂದು ‌ಪೊಲೀಸರು ತಿಳಿಸಿದ್ದಾರೆ.


ಬಂಟ್ವಾಳ ಪೊಲೀಸ್‌ ಉಪಾಧೀಕ್ಷಕ ವಿಜಯ ಪ್ರಸಾದ್‌ ತನಿಖಾಧಿಕಾರಿಯಾಗಿ, ಐದು ತನಿಖಾ ತಂಡಗಳನ್ನು ರಚಿಸಿ ಆರೋಪಿಗಳ ಪತ್ತೆ ನಡೆಸಲಾಗುತ್ತಿದ್ದು, ಬಂಧಿತರ ತೀವ್ರ ವಿಚಾರಣೆ ನಡೆಯುತ್ತಿದೆ. ಇವರಲ್ಲದೆ, ಶಂಕಿತ ಮತ್ತಷ್ಟು ಮಂದಿಯ ವಿಚಾರಣೆಯೂ ನಡೆಯುತ್ತಿದೆ.

ಸುಳ್ಳು ಸುದ್ದಿ ಹರಡಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ನೂತನ ಪೊಲೀಸ್‌ ವರಿಷ್ಠಾಧಿಕಾರಿ ಡಾ. ಅರುಣ್‌ ಹೇಳಿದ್ದಾರೆ. ಮಂಗಳೂರಿನ ಎಸ್ಪಿ ಕಚೇರಿಯಲ್ಲಿ ಯತೀಶ್‌ ಎನ್‌. ಅವರಿಂದ ಶುಕ್ರವಾರ ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವ ಜತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್‌ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರವಾಗಿ ಪರಿಗಣಿಸಲಾಗುವುದು. ರೌಡಿ ಶೀಟರ್‌ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದು ತಿಳಿಸಿದ್ದಾರೆ

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *