BANTWAL
ಬಂಟ್ವಾಳ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಮೆಸ್ಕಾಂ ಇಂಜಿನಿಯರ್ ಸಾವು
ಬಂಟ್ವಾಳ ಅಕ್ಟೋಬರ್ 21: ಬಂಟ್ವಾಳದ ಮಣಿಹಳ್ಳದಲ್ಲಿ ಕಾರುಗಳ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇಇ ಪ್ರವೀಣ್ ಜೋಶಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಬಂಟ್ವಾಳ ಪುರಸಭಾ ವ್ಯಾಪ್ತಿಯ ಮಣಿಹಳ್ಳ ಎಂಬ ಪ್ರದೇಶದಲ್ಲಿ ಎರಡು ಕಾರು ಹಾಗೂ ಬಸ್ಗಳ ನಡುವೆ ಇಂದು ಬೆಳಗ್ಗೆ ಭೀಕರ ಅಪಘಾತ ನಡೆದಿತ್ತು. ಕಾರಿನಲ್ಲಿದ್ದ ವಿಟ್ಲ ಮೆಸ್ಕಾಂ ಇಲಾಖೆಯ ಎಇ ಪ್ರವೀಣ್ ಜೋಶಿ ಅವರು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಅವರು ಚಿಕಿತ್ಸೆಗೆ ಸ್ಪಂದಿಸದೆ ಮಧ್ಯಾಹ್ನ ವೇಳೆಗೆ ಮೃತಪಟ್ಟರು. ಇನ್ನೊಂದು ಕಾರಿನಲ್ಲಿದ್ದ ನಾಲ್ವರು ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
You must be logged in to post a comment Login