Connect with us

    BANTWAL

    ಬಂಟ್ವಾಳ – ಜಿಲ್ಲೆಯ ಬಹುತೇಕ ಠಾಣೆಗಳಲ್ಲಿ ಪ್ರಕರಣ ದಾಖಲಾಗಿರುವ ಆರೋಪಿ ಅರೆಸ್ಟ್

    ಬಂಟ್ವಾಳ ಅಗಸ್ಟ್ 26: ದಕ್ಷಿಣಕನ್ನಡ ಜಿಲ್ಲೆಯಲ್ಲಿರುವ ಬಹುತೇಕ ಎಲ್ಲಾ ಠಾಣೆಗಳಲ್ಲಿ ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಅರೆಸ್ಟ್ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನನ್ನು ಸಜೀಪ ಮುನ್ನೂರು ಗ್ರಾಮದ ಪೆರುವ ನಿವಾಸಿ ಉಮ್ಮರ್ ಫಾರೂಕ್ ಎಂದು ಗುರುತಿಸಲಾಗಿದೆ.


    ಕೊಲೆ ಯತ್ನ, ದರೋಡೆ, ಕಳ್ಳತನ ಸಹಿತ ಸುಮಾರು 17 ಪ್ರಕರಣಗಳಲ್ಲಿ ಉಮ್ಮರ್ ಫಾರೂಕ್ ಅವರು ಆರೋಪಿಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ. ಈತ ಬಂಟ್ವಾಳ ನಗರ, ಗ್ರಾಮಾಂತರ, ಉಪ್ಪಿನಂಗಡಿ, ಬಜಪೆ, ಕೋಣಾಜೆ, ಬರ್ಕೆ, ವಿಟ್ಲ, ಕಡಬ ಹೀಗೆ ಜಿಲ್ಲೆಯ ಬಹುತೇಕ ಎಲ್ಲಾ ಠಾಣೆಗಳಲ್ಲಿ ಈತನ ವಿರುದ್ದ ಒಂದಲ್ಲ ಒಂದು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿದೆ.
    ಇಂದು ಬೆಳಿಗ್ಗೆ ಈತ ಮಾಣಿ ಪರಿಸರದಲ್ಲಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ನಗರ ಠಾಣಾ ಪೋಲೀಸರು ಈತನ ಬಂಧನಕ್ಕೆ ಬಲೆ ಬೀಸಿದ್ದರು. ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    Share Information
    Advertisement
    Click to comment

    You must be logged in to post a comment Login

    Leave a Reply