Connect with us

    BANTWAL

    ಬಂಟ್ವಾಳ – ಮಹಿಳೆಗೆ ಸಹಾಯ ಮಾಡಿದ್ದಕ್ಕೆ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

    ಬಂಟ್ವಾಳ ಡಿಸೆಂಬರ್ 15: ಬಸ್ ನಲ್ಲಿ ರಶ್ ಇದ್ದ ಕಾರಣ ಮಹಿಳೆಯ ಬ್ಯಾಗ್ ಹಿಡಿದುಕೊಂಡಿದ್ದ ಮುಸ್ಲಿಂ ಯುವಕನ ಮೇಲೆ ತಂಡವೊಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಟ್ವಾಳ ರಾಯಿ ಎಂಬಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.


    ಹಲ್ಲೆಗೊಳಗಾದ ವ್ಯಕ್ತಿಯನ್ನು ಮೂಲರಪಟ್ನ ನಿವಾಸಿ ಇಸಾಕ್ (45) ಎಂದು ಗುರುತಿಸಲಾಗಿದೆ. ಮೇಸ್ತ್ರಿ ಕೆಲಸ ಮಾಡುತ್ತಿರುವ ಈತ ಬುಧವಾರ ಬೆಳಗ್ಗೆ ಬಿ.ಸಿ.ರೋಡ್​ನಿಂದ ಮೂಡಬಿದ್ರೆಗೆ ಖಾಸಗಿ ಬಸ್​ನಲ್ಲಿ ಹೋಗುತ್ತಿದ್ದರು. ಬಸ್ ನಲ್ಲಿ ರಶ್ ಇದ್ದಕಾರಣ ಮಹಿಳೆಯೊಬ್ಬರು ಇಸಾಕ್ ಬಳಿ ಬ್ಯಾಗ್ ಹಿಡಿದುಕೊಳ್ಳುವಂತೆ ವಿನಂತಿಸಿದ್ದಾರೆ. ಬಳಿಕ ತಾನು ಇಳಿಯುವ ಜಾಗ ಬಂದಾಗ ಇಸಾಕ್ ರಿಂದ ಬ್ಯಾಗ್ ಪಡೆದು ತೆರಳಿದ್ದಾರೆ. ಆದರೆ ಈ ವೇಳೆ ಬಸ್ ಕಂಡಕ್ಟರ್ ಇಸಾಕ್ ಬಳಿ ಬಂದು ಮಹಿಳೆಯ ಜೊತೆ ಅನುಚಿತವಾಗಿ ವರ್ತಿಸಿದ್ದೀರಿ ಎಂದು ಹಲ್ಲೆ ನಡೆಸಿದ್ದಾನೆ.

    ಅಲ್ಲದೆ ಹಲ್ಲೆ ವೇಳೆ ಬಸ್​ ಕಂಡಕ್ಟರ್​ ಕೆಲವರಿಗೆ ಮೊಬೈಲ್​ನಲ್ಲಿ ಕರೆ ಮಾಡಿ ಕೆಲವು ಯುವಕರನ್ನು ಸ್ಥಳಕ್ಕೆ ಕರೆಸಿಕೊಂಡಿದ್ದಾನೆ. ಬಳಿಕ ಕಂಡಕ್ಟರ್​ ಯುವಕರ ಗುಂಪಿಗೆ ಇಸಾಕ್​ರನ್ನು ಹಸ್ತಾಂತರಿಸಿದ್ದಾರೆ.ಆ ಯುವಕರ ಗುಂಪು ಇಸಾಕ್​ರನ್ನು ರಿಕ್ಷಾದಲ್ಲಿ ಕರೆದುಕೊಂಡು ಹೋಗಿ ರಾಯಿ ಎಂಬಲ್ಲಿನ ನಿರ್ಜನ ಪ್ರದೇಶದಲ್ಲಿ ಮರಕ್ಕೆ ಕಟ್ಟಿ ಹಾಕಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದೆ ಎನ್ನಲಾಗಿದೆ. ಇಸಾಕ್ ತೀವ್ರ ಅಸ್ವಸ್ಥರಾದ ಮೇಲೆ ಯುವಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ. ಪೊಲೀಸರು ಇಸಾಕ್​ರನ್ನು ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿ ಠಾಣೆಗೆ ಕರೆದೊಯ್ದಿದ್ದಾರೆ ಎಂದು ತಿಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply