BANTWAL
ಬಂಟ್ವಾಳ -ಬೈಕ್ ಗೆ ಜಲ್ಲಿಕಲ್ಲು ಸಾಗಾಟದ ಲಾರಿ ಡಿಕ್ಕಿ ಬೈಕ್ ಸವಾರ ಸಾವು
ಬಂಟ್ವಾಳ ಸೆಪ್ಟೆಂಬರ್ 24: ಜಲ್ಲಿಕಲ್ಲು ಸಾಗಿಸುವ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನಪ್ಪಿರುವ ಘಟನೆ ಇಂದು ಬೆಳಗ್ಗೆ ಪಾಣೆಮಂಗಳೂರು ನೂತನ ಸೇತುವೆಯಲ್ಲಿ ನಡೆದಿದೆ.
ಮೃತರನ್ನು ಸಜಿಪ ಬೇಂಕ್ಯ ನಿವಾಸಿ ರಾಜ್ ಕುಮಾರ್ ಎಂದು ಗುರುತಿಸಲಾಗಿದೆ.ರಾಜ್ ಕುಮಾರ್ ಬೈಕಿನಲ್ಲಿ ತೆರಳುತ್ತಿದ್ದು, ಅವರ ಬೈಕ್ ಪಾಣೆಮಂಗಳೂರು ಸೇತುವೆ ಬಳಿ ತಲುಪಿದಾಗ ಎದುರಿನಿಂದ ಬಂದ ಕನ್ ಸ್ಟ್ರಕ್ಷನ್ ಕಂಪೆನಿಯೊಂದಕ್ಕೆ ಸೇರಿದ ಜಲ್ಲಿಕಲ್ಲು ಸಾಗಾಟದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ರಾಜ್ ಕುಮಾರ್ ರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಿ ಅವರು ಕೊನೆಯುಸಿರೆಳೆದಿದ್ದರು ಎಂದು ತಿಳಿದುಬಂದಿದೆ.
ರಾಜ್ ಕುಮಾರ್ ಅವರು ವಾಮದಪದವು ಎಂಬಲ್ಲಿ ಜಾಗ ಖರೀದಿ ಮಾಡಿದ್ದು, ಕೃಷಿ ಮಾಡಿಕೊಂಡಿದ್ದರು. ಇಂದು ಬೆಳಗ್ಗೆ ಅವರು ವಾಮದಪದವಿನಿಂದ ಸಜಿಪದಲ್ಲಿರುವ ತನ್ನ ಮೂಲ ಮನೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
You must be logged in to post a comment Login