BANTWAL
ಬಂಟ್ವಾಳ – ಅಪಘಾತ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಹೊಡೆದಾಟ – ನಾಲ್ವರು ಪೊಲೀಸ್ ವಶಕ್ಕೆ
ಬಂಟ್ವಾಳ ನವೆಂಬರ್ 27: ವಾಹನಗಳ ನಡುವೆ ನಡೆದ ಅಪಘಾತದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ತಂಡಗಳ ನಡುವೆ ಗಲಾಟೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬಂಟ್ವಾಳ ಬಾರೆಕಾಡು ನಿವಾಸಿ ಇರ್ಶಾದ್, ಬಾರೆಕಾಡು ಶಾಹಿಲ್ ಹಾಗೂ ಬಂಟ್ವಾಳ ನಿವಾಸಿಗಳಾದ ಧನುಷ್ ಆಚಾರ್ಯ ಹಾಗೂ ಕೀರ್ತನ್ ಎಂದು ಗುರುತಿಸಲಾಗಿದೆ. ಬಂಟ್ವಾಳದ ತುಂಬೆ ಬಳಿ ಸ್ಕೂಟರ್ ಹಾಗೂ ಅಟೋ ಮಧ್ಯೆ ನಡೆದಿದ್ದ ಅಫಘಾತ ವಿಚಾರದಲ್ಲಿ ಎರಡು ತಂಡಗಳ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ಸ್ಥಳಕ್ಕೆ ಬಂದ ಸ್ಥಳೀಯ ಯುವಕರು ಮತ್ತು ಆಟೋ ರಿಕ್ಷಾ ಸಂಬಂಧಿಗಳು ಒಬ್ಬರಿಗೊಬ್ಬರು ಗಲಾಟೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ.
You must be logged in to post a comment Login