Connect with us

BANTWAL

ದಂತ ವೈದ್ಯಕೀಯ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಸಾವು

Share Information

ಬಂಟ್ವಾಳ ಅಗಸ್ಟ್ 28: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ದಂತ ವೈದ್ಯಕೀಯ ವಿದ್ಯಾರ್ಥಿಯೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ . ಮೃತಪಟ್ಟ ವಿದ್ಯಾರ್ಥಿಯನ್ನು ಕೇರಳ ಮೂಲದ ಡೆನ್ನಿಸ್ ಎಂದು ಗುರುತಿಸಲಾಗಿದೆ .

ಮಂಗಳೂರು ಹೊರವಲಯದ ದೇರಳಕಟ್ಟೆ ದಂತ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ತಂಡ ನಿನ್ನೆ ರಜೆ ಇದ್ದ ಹಿನ್ನೆಲೆಯಲ್ಲಿ ಬಂಟ್ವಾಳ ತಾಲ್ಲೂಕಿನ ಮಂಜಲ್ ಪಾದೆ ಎಂಬಲ್ಲಿನ ಕೆರೆಯಲ್ಲಿ ಈಜಲು ತೆರಳಿತ್ತು . ಆಳವಾದ ಕೆರೆಯಲ್ಲಿ ಸ್ನೇಹಿತರೊಂದಿಗೆ ನೀರಿಗಿಳಿದ ಡೆನ್ನಿಸ್ ಈಜಲಾಗದೆ ಕೆರೆಯಲ್ಲಿ ಮುಳುಗಿದ್ದರು .

ಈ ಸಂದರ್ಭದಲ್ಲಿ ಸ್ನೇಹಿತರು ಸಹಾಯಕ್ಕೆ ನೀರಿಗೆ ಧುಮುಕಿದ್ದರು ಡೆನ್ನಿಸ್ ಅವರನ್ನು ಮೇಲೆತ್ತಲು ಸಾಧ್ಯವಾಗಿರಲಿಲ್ಲ . ಆಳವಾದ ಕೆರೆಯಲ್ಲಿ ಕೆಸರು ತುಂಬಿದ ಹಿನ್ನೆಲೆಯಲ್ಲಿ ಡೆನ್ನಿಸ್ ಮೇಲೆ ಬರಲು ಆಗದೆ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ .

ಘಟನೆ ಕುರಿತು ಮಾಹಿತಿ ಪಡೆದ ಗೂಡಿನಬಳಿಯ ಮುಳುಗು ತಜ್ಞರು ಸ್ಥಳಕ್ಕೆ ಧಾವಿಸಿ ಡೆನ್ನಿಸ್ ಅವರ ಶವವನ್ನು ಮೇಲೆತ್ತಿದ್ದಾರೆ .ಈ ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Share Information
Advertisement
Click to comment

You must be logged in to post a comment Login

Leave a Reply