Connect with us

    BANTWAL

    ಬಂಟ್ವಾಳ – ಮನೆಯಲ್ಲಿ ಬೆಂಕಿ ಅನಾಹುತಕ್ಕೆ ಅಡುಗೆ ಕೋಣೆ ದಾಸ್ತಾನು ಕೊಠಡಿ ಸಂಪೂರ್ಣ ಭಸ್ಮ

    ಬಂಟ್ವಾಳ ಮಾರ್ಚ್ 07: ಆಕಸ್ಮಿಕ ಬೆಂಕಿಗೆ ಮನೆಯ ಅಡುಗೆಕೋಣೆ ಹಾಗೂ ದಾಸ್ತಾನು ಕೊಠಡಿ ಸಂಪೂರ್ಣ ಸುಟ್ಟು ಹೋದ ಘಟನೆ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ಮಾರ್ಚ್ 6 ರ ತಡರಾತ್ರಿ ನಡೆದಿದೆ.


    ಚಂಡ್ತಿಮಾರ್ ನಿವಾಸಿ ಮೋನಪ್ಪ ಪೂಜಾರಿ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆಕಸ್ಮಿಕ ಬೆಂಕಿ ತಗಲಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ 2 ವಾಹನಗಳು ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದು, ಹೀಗಾಗಿ ಮನೆ ರಕ್ಷಿಸಲ್ಪಟ್ಟಿದೆ‌. ಘಟನೆಯಿಂದ ಯಾವುದೇ ಹಾನಿ ಉಂಟಾಗಿಲ್ಲ. ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply