Connect with us

BANTWAL

ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆ

ಬಂಟ್ವಾಳ ಜೂನ್ 05: ಪಾಣೆಮಂಗಳೂರು ನೇತ್ರಾವತಿ ಸೇತುವೆ ಬಳಿ ಬೈಕ್ ಮತ್ತು ಮೊಬೈಲ್ ಇಟ್ಟು ಪುತ್ತೂರು ನಗರಸಭೆ ಸದಸ್ಯ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರುವವರನ್ನು ಪುತ್ತೂರು ನಗರಸಭೆಯ ನೆಲ್ಲಿಕಟ್ಟೆ ವಾರ್ಡ್ ಸದಸ್ಯ ರಮೇಶ್ ರೈ ಎಂದು ಗುರುತಿಸಲಾಗಿದೆ.


ಪ್ರಾಥಮಿಕ ತನಿಖೆಯಲ್ಲಿ ಇದು ಪುತ್ತೂರು ನಗರ ಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ ಅವರಿಗೆ ಸೊತ್ತುಗಳು ಎಂದು ಗೊತ್ತಾಗಿದೆ. ರಮೇಶ್ ರೈ, ಇತ್ತೀಚಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು. ಇಂದು ಬೆಳಗ್ಗೆ ಸುಮಾರು 11 ಗಂಟೆಯಿಂದ ಬೈಕ್ ಹಾಗೂ ಸೊತ್ತುಗಳು ಇಲ್ಲಿ ಅನಾಥವಾಗಿ ಕಂಡು ಬಂದಿವೆ ಎಂದು ಸ್ಥಳೀಯರು ಪೋಲೀಸರಿಗೆ ತಿಳಿಸಿದ್ದಾರೆ.

ಇದೀಗ ಸ್ಥಳದಲ್ಲಿ ರಮೇಶ್ ರೈ ಅವರ ಕುಟುಂಬದ ಸದಸ್ಯರು ಪೋಲೀಸರು ಹಾಗೂ ಸ್ಥಳೀಯರು ಜಮಾಯಿಸಿದ್ದು ಸುತ್ತ ಮುತ್ತಲಿನ ಜಾಗದಲ್ಲಿ ಹುಡುಕಲು ಪ್ರಾರಂಭಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *