ಬಂಟ್ವಾಳ ಫೆಬ್ರವರಿ 7: ಸ್ಕೂಟರ್ ಒಂದಕ್ಕೆ ಟ್ಯಾಂಕರ್ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕಲ್ಲಡ್ಕ ಪೇಟೆಯಲ್ಲಿ ಬೆಳಿಗ್ಗೆ ನಡೆದಿದೆ.


ಮೃತಪಟ್ಟವರನ್ನು ಕಲ್ಲಡ್ಕದ ಬಿಕೆ ನಗರ ನಿವಾಸಿ ಹಿಮಾದ್ ಎಂದು ಗುರುತಿಸಲಾಗಿದ್ದು, ಲಾರಿಯು ಮಂಗಳೂರು ಕಡೆಯಿಂದ ಅತೀವೇಗವಾಗಿ ಬಂದು ಸ್ಕೂಟರ್‌ಗೆ ಡಿಕ್ಕಿಯಾಗಿದ್ದು ಸ್ಕೂಟರ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ಘಟನಾ ಸ್ಥಳಕ್ಕೆ ಟ್ರಾಫಿಕ್ ಎಸ್.ಐ.ರಾಜೇಶ್ ಕೆ.ವಿ.ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share Information