BANTWAL
ಬಂಟ್ವಾಳ ಚೂರಿ ಇರಿತ ಪ್ರಕರಣ, ಆರೋಪಿ ರವಿ ನಾವೂರು ಬಂಧನ…!
![](https://i0.wp.com/themangaloremirror.in/wp-content/uploads/2024/04/For-Advertisement-Please-Contact.jpg?fit=728%2C90&ssl=1)
ಬಂಟ್ವಾಳ: ಬಂಟ್ವಾಳ ಬಡ್ಡಕಟ್ಟೆಯಲ್ಲಿ ವ್ಯಕ್ತಿಯೋರ್ವರಿಗೆ ಚೂರಿ ಇರಿತ ಪ್ರಕರಣ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ. ರವಿ ನಾವೂರು ಚೂರಿ ಇರಿತ ಪ್ರಕರಣದಲ್ಲಿ ಬಂಧಿತನಾದ ಆರೋಪಿಯಾಗಿದ್ದಾನೆ.
ರವಿ ಎ. 14ರ ರಾತ್ರಿ ಜಕ್ರಿಬೆಟ್ಟು ನಿವಾಸಿ ಪುಷ್ಪರಾಜ್ ಅವರ ಕುತ್ತಿಗೆಯ ಭಾಗಕ್ಕೆ ಚೂರಿಯಿಂದ ಇರಿದು ಬಳಿಕ ಪರಾರಿಯಾಗಿದ್ದ, ಗಂಭೀರ ಗಾಯಗೊಂಡಿದ್ದ ಪುಷ್ಪರಾಜ್ ಅವರು ಪ್ರಸ್ತುತ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾರೆ. ಆರೋಪಿ ಕೃತ್ಯ ನಡೆಸಿದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿ ತಲೆಮರೆಸಿಕೊಂಡಿದ್ದ. ಇವರಿಬ್ಬರ ಮಧ್ಯೆ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿ ಗಲಭೆ ನಡೆದಿತ್ತು ಎಂದು ಗುರುರಾಜ್ ಅವರು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿಸಿದ್ದರು. ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ.
You must be logged in to post a comment Login