Connect with us

BANTWAL

ಬಂಟ್ವಾಳ – ತಲವಾರ್ ದಾಳಿ ಸುದ್ದಿ ಸುಳ್ಳು – ಎಸ್ಪಿ ಸ್ಪಷ್ಟನೆ

ಬಂಟ್ವಾಳ ಜೂನ್ 21: ಸಜೀಪದ ದೇರಾಜೆಯಲ್ಲಿ ತಲವಾರ್ ದಾಳಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವುದು ಸುಳ್ಳು ಸುದ್ದಿ ಎಂದು ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕುಮಾರ್ ತಿಳಿಸಿದ್ದಾರೆ.


ಮೊಹಮ್ಮದ್ ಮುಕ್ಷುಲ್ ಎಂಬವರು ಬೋಳಿಯಾರು ಕಡೆಯಿಂದ ಮೆಲ್ಕಾರಿಗೆ ಬೈಕಿನಲ್ಲಿ ಸಹಸವಾರರಾಗಿ ಹೋಗುತ್ತಿದ್ದ ಸಂದರ್ಭದೇರಾಜೆ ಎಂಬಲ್ಲಿ ಬೈಕಿನಲ್ಲಿ ಕುಳಿತ್ತಿದ್ದ ವ್ಯಕ್ತಿಯೊಬ್ಬ ಇವರ ಬೈಕನ್ನು ಹಿಂಬಾಲಿಸಿ ಓಡಿಸಿಕೊಂಡು ಬಂದಿದ್ದಾರೆ. ಈ ವೇಳೆ ಸವಾರರು ಬೈಕಿನ ವೇಗವನ್ನು ಹೆಚ್ಚಿಸಿ ತಪ್ಪಿಸಿಕೊಂಡು ಬಂದಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಧ್ಯೆ ಗುರುವಾರ ರಾತ್ರಿ ಸಜೀಪದಲ್ಲಿ ಇಬ್ಬರ ಮೇಲೆ ತಲವಾರು ದಾಳಿ ನಡೆದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಸಜೀಪ ದೇರಾಜೆಯಲ್ಲಿ ಗುರುವಾರ ರಾತ್ರಿ ತಲವಾರು ದಾಳಿಯಂತಹ ಘಟನೆ ನಡೆದಿಲ್ಲ. ಆದರೆ ಕಳೆದ ರಾತ್ರಿ 10 ಗಂಟೆ ಸುಮಾರಿಗೆ ಬೊಳಿಯಾರು ಕಡೆಯಿಂದ ಮೆಲ್ಕಾರ್ ನತ್ತ ಸಂಬಂಧಿಕರೊಬ್ಬರ ಜೊತೆ ಸ್ಕೂಟರ್ ನಲ್ಲಿ ತೆರಳುತ್ತಿದ್ದ ವೇಳೆ ದೇರಾಜೆಯಲ್ಲಿ ಹೆಲ್ಮೆಟ್ ಧರಿಸಿ ಸ್ಕೂಟರ್ ನಲ್ಲಿ ಕುಳಿತಿದ್ದ ಇಬ್ಬರ ಪೈಕಿ ಓರ್ವ ತಮ್ಮನ್ನು ಅಟ್ಟಿಸಿಕೊಂಡು ಬಂದಿರುವುದಾಗಿ ಮುಹಮ್ಮದ್ ಮಕ್ಬೂಲ್ ಎಂಬವರು ಬಂಟ್ವಾಳ ಗ್ರಾಮಾಂತರ ಠಾಣೆಗೆ ದೂರು ನೀಡಿದ್ದಾರೆ.

ಸ್ಕೂಟರ್ ನತ್ತ ಓಡಿ ಬರುತ್ತಿದ್ದ ಹೆಲ್ಮೆಟ್ ಧರಿಸಿದ್ದ ವ್ಯಕ್ತಿಯ ಕೈಯಲ್ಲಿ ತಲವಾರು ಅಥವಾ ಯಾವುದೇ ಮಾರಕಾಯುಧ ಇತ್ತೇ ಎಂಬುದನ್ನು ನಾನು ನೋಡಿಲ್ಲ. ಆತ ಓಡಿ ಬರುತ್ತಿರುವುದನ್ನು ಗಮನಿಸಿದ ನಾನು, ಸ್ಕೂಟರ್ ಚಲಾಯಿಸುತ್ತಿದ್ದ ನನ್ನ ಸಂಬಂಧಿಕನಲ್ಲಿ ವೇಗವಾಗಿ ಹೋಗುವಂತೆ ಸೂಚಿಸಿದೆ. ಆ ಬಳಿಕ ನಾವು ಹಿಂದಿರುಗಿ ನೋಡದೇ ನಂದಾವರದ ಮನೆಗೆ ತೆರಳಿ ಮನೆಮಂದಿಗೆ ಮಾಹಿತಿ ನೀಡಿದೆವು. ಈ ಬಗ್ಗೆ ವಾಟ್ಸ್ ಆ್ಯಪ್ ಗಳಲ್ಲಿ ವೈರಲ್ ಆಗುತ್ತಿರುವ ತಲವಾರು ದಾಳಿ ಎಂಬ ಸುಳ್ಳುಸುದ್ದಿಗಳಿಗೂ ನನಗೂ ಯಾವುದೇ ಸಂಬಂಧ ಇಲ್ಲ ಹಾಗೂ ನಾನು ಸ್ಥಳದಲ್ಲಿ ಜನರನ್ನು ಜಮಾವಣೆಗೊಳಿಸಿಲ್ಲ” ಎಂದು ತಿಳಿಸಿದ್ದಾರೆ ಎಂದು ಎಸ್ಪಿ ಮಾಹಿತಿ ನೀಡಿದ್ದಾರೆ.

ಮಕ್ಬೂಲ್ ನೀಡಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ತನಿಖೆ ನಡೆಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಸ್ಪಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *