Connect with us

    BANTWAL

    ಬಂಟ್ವಾಳ: ಪ್ರಪಾತಕ್ಕೆ ಉರುಳಿ ಬಿದ್ದ ಬೈಕ್ : ಸಹಸವಾರ ಮೃತ್ಯು..!

    ಬಂಟ್ವಾಳ, ಎಪ್ರಿಲ್ 10: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿ ಹಿಂಬದಿ ಸವಾರನಾಗಿ ಪ್ರಯಾಣಿಸುತ್ತಿದ್ದ ಯುವಕ ಮೃತಪಟ್ಟ ಘಟನೆ ಇಂದು  ಮುಂಜಾವಿನ ವೇಳೆ ಬಂಟ್ವಾಳ  ಬಿಸಿರೋಡಿನಲ್ಲಿ ನಡೆದಿದೆ.

    ಇಲ್ಲಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ಈ ದುರ್ಘಟನೆ ಸಂಭವಿಸಿದ್ದು  ಮೃತನನ್ನು ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಚಿಕ್ಕಮಗಳೂರಿನ ಯಶೋಧರ (25) ಎಂದು ಗುರುತ್ತಿಸಲಾಗಿದೆ. ಈತನ ಸ್ನೇಹಿತ ಬೈಕ್ ಚಲಾಯಿಸುತ್ತಿದ್ದ ಅವಿನಾಶ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಯಾವುದೇ ಪ್ರಾಣಾಪಯವಿಲ್ಲದೆ ಪಾರಾಗಿದ್ದಾನೆ.

    ಇವರಿಬ್ಬರೂ ಮಂಗಳೂರು ಸಿಟಿ ಸೆಂಟರ್ ನಲ್ಲಿ ಉದ್ಯೋಗಿಗಳಾಗಿದ್ದು,ಬೆಳ್ತಂಗಡಿಯಲ್ಲಿ ಸ್ನೇಹಿತನ ಮನೆಯಲ್ಲಿ ನಡೆಯುವ ಕೋಲಕ್ಕೆ ಹೋಗಿ ಅಲ್ಲಿಂದ ಸುಮಾರು 3.30 ಗಂಟೆ ವೇಳೆಗೆ ಬರುತ್ತಿರುವಾಗ ಬಿಸಿರೋಡಿನ ಕೈಕಂಬ ಸಮೀಪದ ಕೆ.ಎಸ್.ಆರ್.ಟಿ.ಸಿ.ಬಸ್ ಡಿಪೋ ದ ಬಳಿ ಬೈಕ್  ಸುಮಾರು ಹತ್ತಕ್ಕೂ ಅಧಿಕ ಅಡಿ ಇರುವ ಆಳಕ್ಕೆ ಉರುಳಿ ಬಿದ್ದಿದೆ.

    ಅಪಘಾತಕ್ಕೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಮೆಲ್ಕಾರ್ ಟ್ರಾಫಿಕ್ ಪೋಲೀಸರು ಸ್ಥಳಕ್ಕೆ ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply