BANTWAL
ಬಂಟ್ವಾಳ: ಬೈಕ್ ಗೆ ಕಾರು ಡಿಕ್ಕಿ- ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು..!
ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾಮಾಜೆ ಕ್ರಾಸ್ ಬಳಿ ಬುಧವಾರ ನಡೆದಿದೆ.
ಬಂಟ್ವಾಳ: ಬೈಕ್ ಗೆ ಕಾರು ಡಿಕ್ಕಿಯಾಗಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಕಾಮಾಜೆ ಕ್ರಾಸ್ ಬಳಿ ಬುಧವಾರ ನಡೆದಿದೆ.
ವಾಮದಪದವು ಸಮೀಪದ ಪಾಂಗಲ್ಪಾಡಿ ನಿವಾಸಿ ಶ್ರೀನಿವಾಸ (ಬಾಬು) ಉಡುಪ (58) ಮೃತಪಟ್ಟ ವ್ಯಕ್ತಿಯಾಗಿದ್ದಾರೆ.
ವಾಮದಪದವನಿಂದ ಅವರು ಬಿಸಿರೋಡಿಗೆ ಬರುತ್ತಿದ್ದ ವೇಳೆ ಹಿಂಬದಿಯಿಂದ ಬರುತ್ತಿದ್ದಕಾರು ಡಿಕ್ಕಿಯಾಗಿದೆ.ಶ್ರೀನಿವಾಸ ಅವರು ಬಂಟ್ವಾಳ ದಿಂದ ಬರುತ್ತಿದ್ದು,ಕಾಮಾಜೆ ಕ್ರಾಸ್ ಬಳಿ ತಿರುಗಿಸಿದ ವೇಳೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ.
ಘಟನೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಇವರನ್ನು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಗಂಭೀರವಾಗಿ ಗಾಯವಾಗಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.
ಮೃತರು ಅಡುಗೆ ವೃತ್ತಿಯವರಾಗಿದ್ದು,ದೇವಸ್ಥಾನದಲ್ಲಿ ಪರಿಚಾರಕಾಗಿದ್ದರು. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೃತರು ಪತ್ನಿ, ಪುತ್ರ,ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
You must be logged in to post a comment Login