Connect with us

BANTWAL

ಬಂಟ್ವಾಳ : ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ ತಪ್ಪಿಸಲು ಹೋಗಿ ಲೈಟ್ ಕಂಬಕ್ಕೆ ಗುದ್ದಿದ ಬಸ್..!

 ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ ವನ್ನು ಬಚಾವ್ ಮಾಡಲು ಹೋಗಿ ಕರೆಂಟ್ ಕಂಬಕ್ಕೆ ಸರಕಾರಿ ಬಸ್ ಗುದ್ದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಬಂಟ್ವಾಳ:  ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ ವನ್ನು ಬಚಾವ್ ಮಾಡಲು ಹೋಗಿ ಕರೆಂಟ್ ಕಂಬಕ್ಕೆ ಸರಕಾರಿ ಬಸ್ ಗುದ್ದಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಟೆಂಪೋ ರಿಕ್ಷಾ ಚಾಲಕನೋರ್ವ ಆಕ್ಟಿವಾವನ್ನು ಓವರ್ ಟೇಕ್ ಮಾಡಲು ಹೋಗಿದ್ದು ಈ ಸಂದರ್ಭ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ತಿರುಗಿದ್ದು, ಈ ಸಂದರ್ಭ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಟೆಂಪೋ ರಿಕ್ಷಾ ಚಾಲಕ ಇಲ್ಯಾಸ್ ಮೆಲ್ಕಾರಿನಿಂದ ಬರುತ್ತಿದ್ದು ಈ ವೇಳೆ ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಆಕ್ಟೀವಾ ಒಂದನ್ನು ಓವರ್ ಟೇಕ್ ಮಾಡಲು ಹೋದ ಸಂದರ್ಭ ಘಟನೆ ನಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ .ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *