Connect with us

    BANTWAL

    ಬಂಟ್ವಾಳ : ಗಣೇಶ ಚತುರ್ಥಿ ಹಬ್ಬ ಶಾಂತಿಯುತ ಆಚರಣೆಗೆ ಪೊಲೀಸ್ ಇಲಾಖೆ ಮನವಿ..!

    ಬಂಟ್ವಾಳ, ಸೆಪ್ಟೆಂಬರ್ 14: ಸೆ. 19 ರಂದು ನಡೆಯಲಿರುವ ಗಣೇಶ್ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತ ವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆಸಿದರು.

    ಆಚರಣೆ ಸಂದರ್ಭದಲ್ಲಿ ಮಾಡಬೇಕಾಗದ ಸರಕಾರದ ನಿಯಮಗಳ ಬಗ್ಗೆ ಸಂಪೂರ್ಣ ವಾದ ಮಾಹಿತಿ ನೀಡಿದರು.
    ತಾಲೂಕಿನಲ್ಲಿ ನಡೆಯುವ ಗಣೇಶ್ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಅಕ್ರಮವಾಗಿ ಮಧ್ಯ ಮಾರಾಟ ಮಾಡುವುದು ಕಂಡು ಬಂದರೆ ಅವರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಇಲಾಖೆ ಸಿದ್ದವಿದೆ. ಅಂತಹ ಸಂಗತಿಗಳು ಕಂಡುಬಂದರೆ ಪೋಲೀಸ್ ಇಲಾಖೆಗೆ ತಿಳಿಸುವಂತೆ ಮನವಿ ಮಾಡಿದರು.

    ಜಿಲ್ಲೆಯಲ್ಲಿ ಗಣೇಶನ ಹಬ್ಬದ ವಿವಿಧ ಕಾರ್ಯಗಳು ಶಾಂತಿಯುತವಾಗಿ ನಡೆಯಬೇಕು ಎಂಬ ದೃಷ್ಟಿಯಿಂದ ರಾತ್ರಿ 10 ಗಂಟೆಯ ಒಳಗೆ ಪ್ರತಿ ದಿನದ ಕಾರ್ಯಕ್ರಮ ಮುಗಿಸಬೇಕು ಎಂದು ತಿಳಿಸಿದರು.

    ಗಣೇಶನ ವಿಗ್ರಹವನ್ನು ಇಡುವ ಚೌಕಿ ಅಥವಾ ಸಭಾ ವೇದಿಕೆಯ ಲ್ಲಿ ರಾತ್ರಿ ಪಾಳಿಯಲ್ಲಿ ಸ್ವಯಂ ಸೇವಕರು ಕಾಯಬೇಕು.
    ಗಣೇಶ ಹಬ್ವಕ್ಕೆ ಶುಭಕೋರುವ ಬ್ಯಾನರ್ ಗಳನ್ನು ಹಾಕಿದರೆ ಎಲ್ಲೂ ಕೂಡ ಯಾವುದೇ ವಿವಾದವಾಗದಂತೆ ಜವಬ್ದಾರಿ ವಹಿಸಬೇಕು.

    ಪಂಚಾಯತ್ ನಿಂದ,ಮೆಸ್ಕಾಂ, ಅಗ್ನಿಶಾಮಕ ದಳದ ಅನುಮತಿ ಯನ್ನು ಪಡೆದುಕೊಳ್ಳಿ, ಕಾರ್ಯಕ್ರಮಗಳು ನಡೆಯುವ ಸ್ಥಳಗಳಲ್ಲಿ ತಾತ್ಕಾಲಿಕ ಸಿಸಿ.ಟಿ.ವಿ ಅಳವಡಿಸಿ, ಮೆರವಣಿಗೆ ವೇಳೆ ಡಿ.ಜೆ.ಗೆ ಅನುಮತಿ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
    ಅಪರಾಧ ವಿಭಾಗದ ಎಸ್.ಐ.ಮೂರ್ತಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply