Connect with us

    DAKSHINA KANNADA

    ಸ್ವಾಮೀಜಿಗಳಿಂದ ಅನಾಗರಿಕ ವರ್ತನೆ : ಕುಮಾರಸ್ವಾಮಿ ಆರೋಪ

    ಪುತ್ತೂರು, ಆಗಸ್ಟ್ 01: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಸೋಮವಾರ ಪುತ್ತೂರು ನೆಹರೂನಗರದ ಮಾಸ್ಟರ್ ಪ್ಲಾನರಿಗೆ ಭೇಟಿ ನೀಡಿದರು.

    ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಳಿಸ್ವಾಮಿ ಬಗ್ಗೆ ಮಾತನಾಡಿದ ಅವರು, ಹತ್ಯೆ ಮಾಡಿದವರ ತಲೆ ಕಡಿಯುತ್ತೇವೆ ಎಂಬ ಹೇಳಿಕೆ ನೀಡುವುದು ಸ್ವಾಮೀಜಿಗಳ ಲಕ್ಷಣವಲ್ಲ. ಸ್ವಾಮೀಜಿಗಳು ಅನಾಗರಿಕರಂತೆ ವರ್ತಿಸುತ್ತಿದ್ದಾರೆ.

    ಸಮಾಜದ ಕಲುಷಿತ ವಾತಾವರಣಕ್ಕೆ ಕಾರಣಕರ್ತರಾಗಿದ್ದಾರೆ ಎಂದು ತಿಳಿಸಿದರು. ಈಗಾಗಲೇ ಜಿಲ್ಲೆಯಲ್ಲಿ ಹತ್ಯೆಗೀಡಾದ ಅಮಾಯಕರ ಮನೆಗಳಿಗೆ ಭೇಟಿ ನೀಡಿ ಅವರ ಕುಟುಂಬದವರಿಗೆ ಸ್ವಾಂತನ ಹೇಳಿ, ಕುಟುಂಬವರಿಗೆ ಧೈರ್ಯ ತುಂಬಿದರು. ಬಲಿಯಾದ ಅಮಾಯಕರ ಘಟನೆಗೆ ಕಾರಣವೇನು ಎಂಬುದರ ಕುರಿತು ಕೂಲಂಕುಷ ತನಿಖೆ ಮಾಡಬೇಕು. ನಿಜವಾದ ಆರೋಪಿಗಳನ್ನು ಪತ್ತೆ ಹಚ್ಚಿ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಮಾಹಿತಿ ಸಂಗ್ರಹಿಸಿ ಸರಕಾರಕ್ಕೆ ಒತ್ತಡ ತರಲಾಗುವುದು ಎಂದರು.

    ಈ ಭಾಗದ ಗ್ರಾಮೀಣ ಪ್ರದೇಶದ ಬಡ ಮಹಿಳೆಯರಿಗೆ ಉದ್ಯೋಗ ನೀಡುವಲ್ಲಿ, ಸಾವಿರಕ್ಕೂ ಅಧಿಕ ಕುಟುಂಬಗಳ ಭದ್ರತೆಗೆ ಕಾರಣವಾದ ಮಾಸ್ಟರ್ ಪ್ಲಾನರಿಯಂತಹ ಸಂಸ್ಥೆ ಮೆಚ್ಚುಗೆಗೆ ಪಾತ್ರವಾಗಿದೆ. ಈ ನಿಟ್ಟಿನಲ್ಲಿ ಸಂಸ್ಥೆಗೆ ಭೇಟಿ ನೀಡಿದ್ದೇನೆ ಎಂದು ತಿಳಿಸಿದರು.

    ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ, ವಿಧಾನ ಪರಿಷತ್ ಸದಸ್ಯರಾದ ಬಿ.ಎಂ.ಫಾರೂಕ್, ಭೋಜೇಗೌಡ, ಜೆಡಿಎಸ್ ಜಿಲ್ಲಾಧ್ಯಕ್ಷ ಜಾಕೆ ಮಾಧವ ಗೌಡ, ಮುಖಂಡರಾದ ಎಂ.,ಬಿ.ಸದಾಶಿವ, ಮಹಮ್ಮದ್ ಕುಂಞಂ ವಿಟ್ಲ, ದಯಾಕರ ಆಳ್ವ, ಜೆಡಿಎಸ್ ತಾಲೂಕು ಅಧ್ಯಕ್ಷ ಅಶ್ರಫ್ ಕಲ್ಲೇಗ, ರತ್ನಾಕರ ಸುವರ್ಣ, ಪ್ರವೀಣ್‌ಚಂದ್ರ ಜೈನ್, ಇಬ್ರಾಹಿಂ ಗೋಳಿಕಟ್ಟೆ, ಫೈಝಲ್ ರಹಿಮಾನ್, ಅಕ್ಷಿತ್, ಮಹಮ್ಮದ್, ಬಿಲಾಲ್, ಜೆಡಿಎಸ್ ಜಿಲ್ಲಾ ಮಹಿಳಾ ಅಧ್ಯಕ್ಷೆ ಸುಮತಿ, ಮಾಸ್ಟರ್ ಪ್ಲಾನರಿ ಮಾಲಕ ಎಸ್.ಕೆ.ಆನಂದ್ ಕುಮಾರಸ್ವಾಮಿ, ಮಾಜಿ ವಿಧಾನಪರಿಷತ್ ಸದಸ್ಯ ಭೋಜೇಗೌಡ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿA ಅವರನ್ನು ಶಾಲು ಹೊಸಿದಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಎಸ್.ಕೆ.ಆನಂದ್ ಅವರ ಮನೆಯವರು, ಸಿಬ್ಬಂದಿಗಳು ಮತ್ತಿತರರು ಉಪಸ್ಥಿತರಿದ್ದರು.

    Share Information
    Advertisement
    Click to comment

    You must be logged in to post a comment Login

    Leave a Reply