ದುಬೈ ಸೆಪ್ಟೆಂಬರ್ 14: ಪಾಪಿ ಪಾಕಿಸ್ತಾನದ ವಿರುದ್ದ ಯಾವುದೇ ರೀತಿ ಕ್ರಿಕೆಟ್ ಆಟ ಆಡುವುದಿಲ್ಲ ಎಂದು ಘೋಷಿಸಿದ್ದ ಪ್ರದಾನಿ ಮೋದಿ ಅವರು ಇದೀಗ 2025ರ ಏಷ್ಯಾ ಕಪ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು (ಭಾನುವಾರ) ದುಬೈಯಲ್ಲಿ ನಡೆಯುವ ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಈ ನಡುವೆ ಪಹಲ್ಗಾಮ್ ದುರಂತದ ಬಳಿಕ ಭಾರತ ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ನಡೆಯುತ್ತಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಪಾಕ್ ವಿರುದ್ಧದ ಪಂದ್ಯವನ್ನು ಬಹಿಷ್ಕರಿಸುವಂತೆ ಕರೆ ನೀಡಲಾಗಿದೆ. ಒಂದು ವೇಳೆ ಪಂದ್ಯ ಆಯೋಜನೆಯಾದರೆ ಯಾರೂ ಕೂಡಾ ವೀಕ್ಷಿಸಬಾರದು ಎಂದು ಮನವಿ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಏಪ್ರಿಲ್ 22ರಂದು ಭಯೋತ್ಪಾದಕರ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಬಳಿಕ ಎರಡು ದೇಶಗಳ ನಡುವಣ ಬಾಂಧವ್ಯವು ಮತ್ತಷ್ಟು ಹದಗೆಟ್ಟಿದೆ. ಪಾಕ್ ಜೊತೆಗಿ ದ್ವಿಪಕ್ಷೀಯ ಬಾಂಧವ್ಯವನ್ನು ಭಾರತ ಕಡಿದುಕೊಂಡಿತ್ತು.
ಉಗ್ರರ ದಾಳಿಗೆ ಪ್ರತೀಕಾರವಾಗಿ ‘ಆಪರೇಷನ್ ಸಿಂಧೂರ’ ಹೆಸರಿನ ಕಾರ್ಯಾಚರಣೆ ನಡೆಸಿದ ಭಾರತ, ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿತ್ತು. ಇದರ ಬೆನ್ನಲ್ಲೇ ಸಂಘರ್ಷ ತೀವ್ರಗೊಂಡಿತ್ತು. ಪಹಲ್ಗಾಮ್ ದಾಳಿಯಲ್ಲಿ ಮೃತಪಟ್ಟ ಶುಭಂ ದ್ವಿವೇದಿ ಪತ್ನಿ ಐಶಾನ್ಯ ಬಿಸಿಸಿಐ ವಿರುದ್ಧ ಕಿಡಿಕಾರಿದ್ಧಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಗೆ ಮೃತಪಟ್ಟ 26 ಕುಟುಂಬಗಳ ಮೇಲೆ ಭಾವನಗಳೇ ಇಲ್ವಾ. ಪಂದ್ಯ ಬಹಿಷ್ಕರಿಸಿ ಎಂದು ಕರೆಕೊಟ್ಟಿದ್ದಾರೆ.



