Connect with us

    KARNATAKA

    ATM ಸೆಂಟರಲ್ಲಿ ಹಣ ತೆಗೆಯಲು ಸಹಾಯ ಕೇಳುವಾಗ ಇರಲಿ ಎಚ್ಚರ..! ಉಡುಪಿಯಲ್ಲಿ ಈ ಜಾಲದ ಖತರ್ನಾಕ್ ಗ್ಯಾಂಗ್ ಅರೆಸ್ಟ್..!

    ಉಡುಪಿ : ಎಟಿಎಂ ಕೇಂದ್ರಗಳಲ್ಲಿ ಹಣ ತೆಗೆಯಲು ಗೊತ್ತಾಗದೆ ಗೊಂದಲಗಳು  ಏರ್ಪಡುವಾಗ  ಇತರರ ಸಹಾಯ ಪಡೆಯುವಾ್ಗ ಇರಲಿ ಎಚ್ಚರ ಯಾಕೆಂದ್ರೆ  ಎಟಿಎಂ ಕೇಂದ್ರದಿಂದ ಹಣ ತೆಗೆಯುಲು ಸಹಾಯ ಮಾಡುವ ನೆಪದಲ್ಲಿ ಗ್ರಾಹಕರ ಕಣ್ಣು ತಪ್ಪಿಸಿ ಅವರ ಎಟಿಎಂ ಕಾರ್ಡ್ ಬಳಸಿ ಹಣ ಎಗರಿಸಿದ ಖತರ್ನಾಕ್  ಗ್ಯಾಂಗನ್ನು ಉಡುಪಿ ಪೊಲೀಸರು ಬಂಧಸಿದ್ದಾರೆ.

    ಜಿಲ್ಲೆಯಲ್ಲಿ ನಡೆದ  ಮೂರು ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಹರಿಯಾಣ ಮೂಲದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮೂರು ಪ್ರಕರಣಗಳು ಬೈಂದೂರು ಠಾಣಾ ನಡೆದಿದ್ದು ದೂರು ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರ ತಂಡ ಹರಿಯಾಣ ಮೂಲದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಹರಿಯಾಣ ರಾಜ್ಯ ಬರ್ಸಿ ಜಟಾನ್‌ನ ಸಂದೀಪ್ (36), ಹರಿಯಾಣ ಔರಂಗನಗರದ ರವಿ (27) ಬಂಧಿತ ಆರೋಪಿಗಳಾಗಿದ್ದು ಇವರಿಂದ 21 ಸಾವಿರ ನಗದು, 217 ಎಟಿಎಂ ಕಾರ್ಡ್, ಪಿಒಎಸ್ ಯಂತ್ರ, 2 ಮೊಬೈಲ್ ಹಾಗೂ ಒಂದು ಮೋಟಾರ್ ಸೈಕಲ್‌ನ್ನು ವಶಕ್ಕೆ ಪಡೆಯಲಾಗಿದೆ. ಆರೊಪಿಗಳ ಮೇಲೆ ವಿವಿಧ ರಾಜ್ಯಗಳಲ್ಲಿ 20ಕ್ಕೂ ಅಧಿಕ ಪ್ರಕರಣ ದಾಖಲಾಗಿರುವುದು ತನಿಖೆ ವೇಳೆ ತಿಳಿದುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇವರು ಬಹುತೇಕ ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣ, ರಾಜಸ್ತಾನ ಕಡೆಗಳಲ್ಲಿ ಇಂತಹ ಕುಕೃತ್ಯಗಳನ್ನು ಎಸಗಿದ್ದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎನ್ನಲಾಗಿದೆ. ಶಿರೂರು ಭಾಗದ ಎರಡು ಎಟಿಎಂ ಹಾಗೂ ಬೈಂದೂರಿನ ಒಂದು ಎಟಿಎಂ ಕೇಂದ್ರದಲ್ಲಿ ಗ್ರಾಹಕರ ಸೋಗಿನಲ್ಲಿ ಬಂದು ನೈಜ ಗ್ರಾಹಕರಿಗೆ ಹಣ ವಿಥ್‌ಡ್ರಾ ಮಾಡಲು ಸಹಕಾರ ಮಾಡುವ ನೆಪದಲ್ಲಿ ಬೇರೆ ಎಟಿಎಂ ಕಾರ್ಡ್ ನೀಡಿ ಮೂರು ಕಡೆ ಒಟ್ಟು 2 ಲಕ್ಷದ 26 ಸಾವಿರ ಹಣ ಎಗರಿಸಿದ್ದರು. ಈ ಕುರಿತು ಮೂರು ಪ್ರತ್ಯೇಕ ಪ್ರಕರಣಗಳು ಬೈಂದೂರು ಠಾಣೆಯಲ್ಲಿ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಕುಂದಾಪುರದಲ್ಲಿ ಬುಧವಾರ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ. ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್.ಟಿ.ಸಿದ್ದಲಿಂಗಪ್ಪ, ಪರಮೇಶ್ವರ ಹೆಗಡೆ, ಕುಂದಾಪುರ ಡಿವೈಎಸ್ಪಿ ಬೆಳ್ಳಿಯಪ್ಪ ಕೆ.ಯು, ಬೈಂದೂರು ವೃತ್ತನಿರೀಕ್ಷಕ ಸವಿತ್ರ ತೇಜ್ ಸೂಚನೆಯಂತೆ, ಬೈಂದೂರು ಪೊಲೀಸ್ ಠಾಣೆ ಪಿಎಸ್‌ಐ ತಿಮ್ಮೇಶ್, ಅಪರಾಧ ವಿಭಾಗದ ಸಿಬ್ಬಂದಿಗಳಾದ ಸುಜಿತ್ ಕುಮಾರ್, ಮಾಳಪ್ಪ, ಸೂರ ನಾಯ್ಕ್, ನಾಗಶ್ರೀ, ಶ್ರೀಧರ ಪಾಟೀಲ್ ಹಾಗೂ ಕುಂದಾಪುರ ಠಾಣೆಯ ಅಪರಾಧ ವಿಭಾಗದ ಸಿಬ್ಬಂದಿಗಳು ಸಹಕರಿಸಿದ್ದರು.

     

    Share Information
    Advertisement
    Click to comment

    You must be logged in to post a comment Login

    Leave a Reply