Connect with us

KARNATAKA

ಬೆಳಗಾವಿ – ಮದುವೆಗೆ ಹೊರಟಿದ್ದವರು ಸೇರಿದ್ದು ಮಸಣಕ್ಕೆ

ಖಾನಾಪುರ ಫೆಬ್ರವರಿ 22: ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಆರು ಮಂದಿ ಸಾವನಪ್ಪಿದ ಘಟನೆ ಬೆಳಗಾವಿಯ ನಂದಗಢ ಪೊಲೀಸ್ ಠಾಣೆ ವ್ಯಾಪ್ತಿಯ ಮಂಗೇನಕೊಪ್ಪದ ಹದ್ದಿನಲ್ಲಿ ಗುರುವಾರ ನಡೆದಿದೆ.


ಮೃತರನ್ನು ಧಾರವಾಡದವರಾದ ಕಾರ್‌ ಚಾಲಕ ಶಾರೂಖ್‌ ಪೆಂಡಾರಿ (30), ಇಕ್ಬಾಲ್‌ ಜಮಾದಾರ (50), ಹಾವೇರಿಯವರಾದ ಸಾನಿಯಾ ಲಂಗೋಟಿ (37), ಉಮ್ರಾ ಬೇಗಮ್‌ ಲಂಗೋಟಿ (17), ಶಬನಮ್‌ ಲಂಗೋಟಿ (37), ಫರಾನ್‌ ಲಂಗೋಟಿ (13) ಎಂದು ಗುರುತಿಸಲಾಗಿದೆ. ಧಾರವಾಡದ ಫರ್ಹಾತ್‌ ಬೆಟಗೇರಿ (18), ಸಾನಿಯಾ ಇಕ್ಬಾಲ್‌ ಜಮಾದಾರ (36), ಹಾವೇರಿಯ ಸೋಫಿಯಾ ಲಂಗೋಟಿ (22) ಹಾಗೂ ಮಹಿನ್‌ ಲಂಗೋಟಿ (7) ಗಾಯಗೊಂಡಿದ್ದಾರೆ.

ಖಾನಾಪುರ ತಾಲ್ಲೂಕಿನ ಗೋಲ್ಯಾಳ ಗ್ರಾಮದಲ್ಲಿ ಗುರುವಾರ ಸಂಬಂಧಿಕರ ಮದುವೆ ಇತ್ತು. ಆ ಮದುವೆಯ ಕೆಲ ಸಾಮಗ್ರಿಗಳು ಇವರ ಕಾರಿನಲ್ಲಿದ್ದವು. ಮದುವೆ ಕಾರ್ಯಕ್ಕೆ ತಡವಾದ ಕಾರಣ ಬೇಗ ಬರುವಂತೆ ಸಂಬಂಧಿಕರು ಫೋನ್‌ ಮಾಡುತ್ತಿದ್ದರು. ಇದರಿಂದ ಕಾರನ್ನು  ಚಾಲಕ ವೇಗವಾಗಿ ಓಡಿಸುತ್ತಿದ್ದ ಎಂದು ಹೇಳಲಾಗಿದೆ. ಚನ್ನಮ್ಮನ ಕಿತ್ತೂರು ಕಡೆಯಿಂದ ಬೀಡಿ ಗ್ರಾಮದ ಕಡೆಗೆ ಹೊರಟಿದ್ದ ಕಾರಿನಲ್ಲಿ ಮೂವರು ಮಕ್ಕಳೂ ಸೇರಿದಂತೆ 10 ಮಂದಿ ಪ್ರಯಾಣಿಸುತ್ತಿದ್ದರು. ಕಾರು ಮಂಗೇನಕೊಪ್ಪ ಗ್ರಾಮದ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆಯಿತು ಎಂದು ಮೂಲಗಳು ತಿಳಿಸಿವೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *