Connect with us

    KARNATAKA

    ಬೆಳಗಾವಿ – ಕ್ರಿಕೆಟ್ ಆಡುತ್ತಿದ್ದ ಇಬ್ಬರು ಯುವಕರ ಕೊಲೆ

    ಬೆಳಗಾವಿ ಡಿಸೆಂಬರ್ 26: ಕ್ರಿಕೆಟ್ ಆಟ ಆಡುತ್ತಿದ್ದ ಇಬ್ಬರು ಯುವಕರಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಳಗಾವಿಯ ಹೊರವಲಯ ಶಿಂದೊಳ್ಳಿ ಗ್ರಾಮದಲ್ಲಿ ನಡೆದಿದೆ.


    ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಬಸವರಾಜ್ ಬೆಳಗಾಂವ್ಕರ್ (22) ಹಾಗೂ ಗಿರೀಶ್ ನಾಗಣ್ಣವರ (22) ಹತ್ಯೆಯಾದವರು. ನಿನ್ನೆ ಶಿಂದೋಳಿ ಗ್ರಾಮದ ಸರ್ಕಾರಿ ಶಾಲೆಯ ಮೈದಾನದಲ್ಲಿ ಹೊನಲು ಬೆಳಕಿನ ಕ್ರಿಕೆಟ್ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅಪರಿಚಿತ ವ್ಯಕ್ತಿಗಳು ಮೈದಾನದಲ್ಲಿ ವಾಹನ ನುಗ್ಗಿಸಿದ್ದಾರೆ. ಇದಕ್ಕೆ ಕ್ರಿಕೆಟ್ ಆಡುತ್ತಿದ್ದ ಯುವಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಸಿಟ್ಟಾದ ಅಪರಿಚಿತ ವಾಹನ ಚಾಲಕ ವಾಹನದಿಂದ ಕೆಳಗಿಳಿದು ಇಬ್ಬರಿಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದಾನೆ.

    Share Information
    Advertisement
    Click to comment

    You must be logged in to post a comment Login

    Leave a Reply