Connect with us

    BELTHANGADI

    ಬೆಳಾಲು ನಿವೃತ್ತ ಶಿಕ್ಷಕ ಕೊಲೆ ಪ್ರಕರಣ – ಅಳಿಯ ಮತ್ತು ಮೊಮ್ಮಗ ಅರೆಸ್ಟ್

    ಪುತ್ತೂರು ಅಗಸ್ಟ್ 24: ಬೆಳಾಲು ಎಂಬಲ್ಲಿ ನಿವೃತ್ತ ಶಿಕ್ಷಕನ ಕಡಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂದಿಸಿದಂತೆ ಇದೀಗ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಕಾಸರಗೋಡು ಮುಳ್ಳೇರಿಯ ನಿವಾಸಿ ರಾಘವೇಂದ್ರ ಕೆದಿಲಾಯ(52) ,ಮುರಳೀಕೃಷ್ಣ (20) ಎಂದು ಗುರುತಿಸಲಾಗಿದೆ.


    ಆಗಸ್ಟ್ 20 ರಂದು ನಿವೃತ್ತ ಶಿಕ್ಷಕ ಬಾಲಕೃಷ್ಣ ಬಡಕ್ಕಿಲ್ಲಾಯ (83) ಎಂಬವರನ್ಮು ಕಡಿದು ಕೊಲೆ ಮಾಡಲಾಗಿತ್ತು. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಆಸ್ತಿ ವಿಚಾರಕ್ಕೆ ನಡೆದ ಕೊಲೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿತ್ತು, ಬಳಿಕ ತನಿಖೆ ನಡೆಸಿದ ಪೊಲೀಸರು ಆರೋಪಿಗಳನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸಿದ ವೇಳೆ ಇಬ್ಬರು ಬಾಯಿಬಿಟ್ಟಿದ್ದಾರೆ.
    ಬಂಧಿತ ಆರೋಪಿಗಳಲ್ಲಿ ಓರ್ವನ ಮೇಲೆ ಕೇರಳದ ಬದಿಯಡ್ಕ ಪೋಲೀಸ್ ಠಾಣೆಯಲ್ಲಿ ನಡೆದ ಪ್ರಕರಣ ದಾಖಲಾಗಿದೆ. ಕೊಲೆಗೆ ಸಂಬಂಧಿಸಿದಂತೆ ಇನ್ನಷ್ಟು ಆರೋಪಿಗಳ ಬಂಧನ ಬಾಕಿ ಇದೆ.

    Share Information
    Advertisement
    Click to comment

    You must be logged in to post a comment Login

    Leave a Reply