Connect with us

BELTHANGADI

ಬೆಳ್ತಂಗಡಿ ಸೇತುವೆ ಬಳಿ ಆಂಬ್ಯುಲೆನ್ಸ್ ವಾಹನ ಪಲ್ಟಿ – ಮೂವರಿಗೆ ಗಾಯ

ಬೆಳ್ತಂಗಡಿ ಡಿಸೆಂಬರ್ 05: ಚಾಲಕನ ನಿಯಂತ್ರಣ ತಪ್ಪಿ ಆಂಬ್ಯುಲೆನ್ಸ್ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ. ಈ ಅಪಘಾತದಲ್ಲಿ ಆಂಬುಲೆನ್ಸ್ ನಲ್ಲಿದ್ದ ಓರ್ವ ವೈದ್ಯ ಸೇರಿ ಒಟ್ಟು ಮೂವರಿಗೆ ಗಾಯಗಳಾಗಿವೆ.


ಕಕ್ಕಿಂಜೆಯ ಖಾಸಗಿ ಆಸ್ಪತ್ರೆಗೆ ಸೇರಿದ್ದ ಈ ಅಂಬ್ಯುಲೆನ್ಸ್ ಮೆಡಿಸಿನ್ ತರಲು ಬೆಳ್ತಂಗಡಿಗೆ ಬರುತ್ತಿದ್ದರು ಎಂದು ಹೇಳಲಾಗಿದೆ. ಚಾಲಕನ ನಿಯಂತ್ಪರಣ ತಪ್ಪಿ ಬೆಳ್ತಂಗಡಿ ಸೇತುವೆ ಬಳಿ ಪಲ್ಟಿಯಾಗಿದೆ. ಪಲ್ಟಿಯಾದ ರಭಸಕ್ಕೆ ಬೊಲೆರೋ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.


ಈ ಘಟನೆಯಲ್ಲಿ ವಾಹನದಲ್ಲಿ ಡಾ.‌‌ನಿತಿನ್ ಅವರಿಗೆ ಕೈಯಲ್ಲಿ ಮೂಳೆ‌ ಮುರಿತಕ್ಕೊಳಗಾಗಿದ್ದು ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಾದ ಇನ್ನಿಬ್ಬರು ಆಸ್ಪತ್ರೆಯ ಸಿಬ್ಬಂದಿ ರಿತೇಶ್ ಮತ್ತು ಹುಝೈರ್ ಎಂದು ಗುರುತಿಸಲಾಗಿದ್ದು, ಅವರು ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಂಬುಲೆನ್ಸ್ ನಲ್ಲಿ ರೋಗಿಗಳು ಇರಲಿಲ್ಲ ಎಂದು ತಿಳಿದು ಬಂದಿದೆ.
ಘಟನೆಯಿಂದ ಸುಮಾರು ಅರ್ಧ ತಾಸು ಟ್ರಾಫಿಕ್ ಜಾಮ್ ಉಂಟಾಯಿತು. ತಕ್ಷಣ ಸ್ಪಂದಿಸಿದ ಬೆಳ್ತಂಗಡಿ ಟ್ರಾಫಿಕ್ ಪೊಲೀಸರು ನಾಗರಿಕರ ಸಹಕಾರದಿಂದ ವಾಹನ ಸಂಚಾರ ಸುಗಮ ಗೊಳಿಸಿದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *