Connect with us

BELTHANGADI

ಬೆಳ್ತಂಗಡಿ :ಶ್ರೀಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಬಯಲಾಟದ ಬ್ಯಾನರ್ ಹರಿದ ಕಿಡಿಗೇಡಿಗಳು….!!

ಬೆಳ್ತಂಗಡಿ ಡಿಸೆಂಬರ್ 03: ಶ್ರೀಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಬಯಲಾಟಕ್ಕೆ ಹಾಕಿದ್ದ ಬ್ಯಾನರ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ಮರೋಡಿ ಗ್ರಾಮದಲ್ಲಿ ನಡೆದಿದೆ.


ಗ್ರಾಮದ ಪೊಸರಡ್ಕ ಗರಡಿ ವಠಾರದಲ್ಲಿ ಬುಧವಾರದಂದು ನಡೆದಿದ್ದ ಯಕ್ಷಗಾನ ಬಯಲಾಟಕ್ಕೆ ಶುಭ ಕೋರಲು ಅನೇಕ ಬ್ಯಾನರ್ಗಳನ್ನು ಅಳವಡಿಸಲಾಗಿತ್ತು. ಕೆಲವು ಕಿಡಿಗೇಡಿಗಳು ಏಕಾ ಏಕಿ ನಿನ್ನೆ ರಾತ್ರಿ ಬ್ಯಾನರ್ ನ್ನು ಹರಿದು ಕಿತ್ತೆಸೆದ ಘಟನೆ ವರದಿಯಾಗಿದೆ.

ಪೊಸರಡ್ಕ ವಠಾರದಲ್ಲೂ ಗರಡಿಯಿದ್ದು ಗೆಜ್ಜೆಗಿರಿ ಕ್ಷೇತ್ರ ಮಹಾತ್ಮೆ ಯಕ್ಷಗಾನವೂ ಸಾವಿರಾರು ಭಕ್ತರ ಸಮ್ಮುಖದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತ್ತು. ಆದರೆ ಇದನ್ನು ಸಹಿಸಿದ ಕಿಡಿಗೇಡಿಗಳ ಗುಂಪು ಬ್ಯಾನರ್ ತೆರವುಗೊಳಿಸುವ ಮುನ್ನವೇ ಅದನ್ನು ಹರಿದು ಕ್ಷೇತ್ರಕ್ಕೆ ಅಪಮಾನವೇಸೆಗಿದ್ದಾರೆ. ಈ ವಿಕೃತಿ ಮೆರೆದವರು ಯಾರೆ ಇದ್ದರು ತಪ್ಪೋಪ್ಪಿಕೊಳ್ಳದೆ ಹೋದರೆ ದೈವಗಳ ಮೊರೆ ಹೋಗುವುದಾಗಿ ಯಕ್ಷಗಾನ ಆಯೋಜಕರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *