Connect with us

    BELTHANGADI

    ಬೆಳ್ತಂಗಡಿ – ರಸ್ತೆಯಲ್ಲಿ ಬಿದ್ದಿದ್ದ ಮರಕ್ಕೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವು

    ಬೆಳ್ತಂಗಡಿ ಜೂನ್ 15: ರಸ್ತೆಗೆ ಉರುಳಿ ಬಿದ್ದಿದ್ದ ಮರಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಧರ್ಮಸ್ಥಳದಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪದ ರಸ್ತೆಯಲ್ಲಿ ನಡೆದಿದೆ.


    ಮೃತರನ್ನು ಓಡಿಲ್ನಾಲ ಮುಗುಳಿಚತ್ರ ನಿವಾಸಿ ವಸಂತ್ ಕುಮಾರ್ ಜೈನ್ (42) ಎಂದು ಗುರುತಿಸಲಾಗಿದೆ. ಇವರು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟ ಸಮೀಪ ಹೋಟೆಲ್ ನಡೆಸುತ್ತಿದ್ದು ಧರ್ಮಸ್ಥಳದಲ್ಲಿ ವಾಸವಾಗಿದ್ದರು.

    ಮರ ಮಧ್ಯರಾತ್ರಿ ಉರುಳಿಬಿದ್ದಿದ್ದು , ಮುಂಜಾನೆ ಧರ್ಮಸ್ಥಳ ಕಡೆಯಿಂದ ಸ್ನಾನಘಟ್ಟ ಬರುವ ಮಾರ್ಗ ಮಧ್ಯೆ ರಸ್ತೆಗೆ ಬಿದ್ದ ಮರವನ್ನು ಗಮನಿಸದೆ ಬೈಕ್ ಢಿಕ್ಕಿಯಾಗಿದ್ದು, ರಸ್ತೆಗೆ ಎಸೆಯಲ್ಪಟ್ಟ ಅವರು, ತಲೆಗೆ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply