Connect with us

BELTHANGADI

ಬೆಳ್ತಂಗಡಿ – ಗುಂಡಿ ಬಿದ್ದ ರಸ್ತೆಯಲ್ಲಿ ದೀಪಾವಳಿ ಆಚರಣೆ

ಬೆಳ್ತಂಗಡಿ ಅಕ್ಟೋಬರ್ 27:ರಸ್ತೆ ಗುಂಡಿಗಳನ್ನು ದುರಸ್ತ ಮಾಡದ ಸರಕಾರದ ವಿರುದ್ದ ಯುವಕರ ತಂಡವೊಂದು ವಿಭಿನ್ನ ರೀತಿಯಾಗಿ ಪ್ರತಿಭಟನೆ ಮಾಡಿದ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಬೆಳ್ತಂಗಡಿ ಸಮೀಪದ ಲಾಯಿಲ ಗ್ರಾಮದ ರಾಘವೇಂದ್ರ ಮಠದ ಹತ್ತಿರ ರಾಷ್ಟ್ರೀಯ ಹೆದ್ದಾರಿಯ ರಸ್ತೆ ಗುಂಡಿಗಳಲ್ಲಿ ದೀಪ ಹಚ್ಚಿ ಯುವಕರ ತಂಡ ದೀಪಾವಳಿ ಆಚರಣೆ ಮಾಡಿದೆ.


ರಾಷ್ಟ್ರೀಯ ಹೆದ್ದಾರಿ ಹೆದ್ದಾರಿಯಲ್ಲಿರುವ ಗುಂಡಿಗಳಲ್ಲಿ ದಿನನಿತ್ಯ ಪ್ರಯಾಣಿಸುವ ಜನಪ್ರತಿನಿಧಿಗಳು , ಅಧಿಕಾರಿಗಳಿಗೆ ಕಣ್ಣು ಕಾಣದಿದ್ದು ದೀಪ ಹಚ್ಚಿ ಗುಂಡಿ ಕಾಣುವಂತೆ ಮಾಡುವ ಉದ್ದೇಶದಿಂದ ಈ ರೀತಿ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಸಾಮಾಜಿಕ ಜಾಲತಾಣ ವಿಭಾಗದ ಜಿಲ್ಲಾ ನಾಯಕ ಸಂದೀಪ್ ಎಸ್ ಅಳದಂಗಡಿ ಮಾತನಾಡಿ ನಮ್ಮ ತಾಲೂಕಿನ ಅವ್ಯವಸ್ಥೆ ಇಡೀ ರಾಜ್ಯದಲ್ಲಿಯೇ ಕುಖ್ಯಾತಿ ಪಡೆದಿದೆ. ರಾಜ್ಯ ಸಂಪುಟ ಸಚಿವ ಸುನೀಲ್ ಕುಮಾರ್ ಇತ್ತೀಚಿಗೆ ರಸ್ತೆ ಬದಲಿಸಿ ಪ್ರಯಾಣಿಸುವ ಮೂಲಕ ಶಾಸಕ , ಸಂಸದರಿಗೆ ನಾಚಿಕೆ ವಿಚಾರ ಎಂದರು.

Share Information
Continue Reading
Advertisement
Click to comment

Leave a Reply

Your email address will not be published. Required fields are marked *