BELTHANGADI
ಬೆಳ್ತಂಗಡಿ – ಎರಡು ದನದ ಕರುಗಳನ್ನು ತಿಂದು ಹಾಕಿದ ಚಿರತೆ
ಬೆಳ್ತಂಗಡಿ ಡಿಸೆಂಬರ್ 5: ಚಿರತೆಯೊಂದು ದನದ ಕೊಟ್ಟಿಗೆಗೆ ದಾಳಿ ಮಾಡಿ ಎರಡು ಕರುಗಳನ್ನು ಸಾಯಿಸಿದ ಘಟನೆ ಮುಂಡೂರು ಗ್ರಾಮದಲ್ಲಿ ನಡೆದಿದೆ.
ಮಂಡೂರು ಗ್ರಾಮದ ಕೇರಿಯಾರ್ ಗುರುವಪ್ಪ ಸಾಲ್ಯಾನ್ ಅವರಿಗೆ ಸೇರಿದ ಎರಡು ದನದ ಕರುಗಳ ಮೇಲೆ ಚಿರತೆ ದಾಳಿ ಮಾಡಿ ಕೊಂದು ಹಾಕಿದೆ. ಗುರುವಪ್ಪ ತಮ್ಮ ಮನೆ ಸಮೀಪ ಕರುಗಳನ್ನು ಕಟ್ಟಿ ಹಾಕಿದ್ದರು. ರಾತ್ರಿ ಅಲ್ಲಿಗೆ ಆಗಮಿಸಿದ ಚಿರತೆ ಕರುಗಳ ಮೇಲೆ ದಾಳಿ ಮಾಡಿ ಕೊಂದು ಅನಂತರ ತೋಟಕ್ಕೆ ಎಳೆದೊಯ್ದು ತಿಂದು ಹಾಕಿರುವುದು ಕಂಡುಬಂದಿದೆ. ಒಂದೂವರೆ ತಿಂಗಳ ಹಿಂದೆ ರಾತ್ರಿ ಬಂದ ಚಿರತೆ ಕರುವೊಂದರ ಮೇಲೆ ದಾಳಿ ನಡೆಸಿ ತಿಂದು ಹಾಕಿತ್ತು. ಇದರ ಬಗ್ಗೆಯೂ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು.
You must be logged in to post a comment Login