Connect with us

    BELTHANGADI

    ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ದಿಢೀರ್ ಭೇಟಿ – ಅಧಿಕಾರಿಗಳಿಗೆ ಕ್ಲಾಸ್

    ಪುತ್ತೂರು ಜುಲೈ 02: ಬೆಳ್ತಂಗಡಿ ತಾಲೂಕು ಕಚೇರಿಗೆ ಶಾಸಕ ಹರೀಶ್ ಪೂಂಜಾ ನಿನ್ನೆ ಧಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


    ಕಡತ ವಿಲೇವಾರಿಗೆ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ದಿಢೀರ್ ಎಂದು ತಾಲೂಕು ಕಚೇರಿಗೆ ಆಗಮಿಸಿದ ಶಾಸಕ ಹರೀಶ್ ಪೂಂಜಾ ಸತಾಯಿಸುತ್ತಿದ್ದ ಅಧಿಕಾರಿಗಳ ಕ್ಲಾಸ್ ತೆಗೆದುಕೊಂಡಿದ್ದಾರೆ. ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂಗೂ ಕ್ಲಾಸ್ ತೆಗೆದುಕೊಂಡ ಪೂಂಜ, ಕಚೇರಿಗೆ ಆಗಮಿಸಿದ ಜನರ ಸಮಸ್ಯೆಯನ್ನು ಆಲಿಸಿದರು.ಅಧಿಕಾರಿಗಳ ಸ್ಪಂದನೆ ಬಗ್ಗೆ , ಜನರಿಂದ ಮಾಹಿತಿ ಪಡೆದ ಶಾಸಕ , ಬಳಿಕ ರೆಕಾರ್ಡ್ ರೂಮ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    Share Information
    Advertisement
    Click to comment

    You must be logged in to post a comment Login

    Leave a Reply