BELTHANGADI
ಬೆಳ್ತಂಗಡಿ: ಆಸ್ತಿ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಳ್ತಂಗಡಿ: ಆಸ್ತಿ ವಿಚಾರದಲ್ಲಿ ನಡೆದ ಗಲಾಟೆ ಕೊಲೆಯಲ್ಲಿ ಅಂತ್ಯ
ಬೆಳ್ತಂಗಡಿ ಫೆಬ್ರವರಿ 10: ಸಂಬಂಧಿಗಳ ನಡುವೆ ಆಸ್ತಿ ವಿಚಾರದಲ್ಲಿ ನಡೆದ ಚರ್ಚೆ ತಾರಕಕ್ಕೇರಿ ಕೊಲೆಯಲ್ಲಿ ಅಂತ್ಯವಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ನಡೆದಿದೆ.
ಉಮೇಶ್ ಸಮಗಾರ (50 ವರ್ಷ) ಕೊಲೆಯಾದ ವ್ಯಕ್ತಿ ವ್ಯಕ್ತಿಯಾಗಿದ್ದು, ತಂದೆ ಮಗ ಸೇರಿ ಈ ಕೊಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಕೊಲೆ ಆರೋಪಿಗಳಾದ ತಂದೆ ಯೋಗೀಶ್ ಮತ್ತು ಮಗ ಜೀವನ್ ರನ್ನು ಪೋಲೀಸರು ಬಂಧಿಸಿದ್ದಾರೆ.
ಕೊಲೆಯಾದ ಉಮೇಶ್ ಸಮಗಾರ ಅವರು ಮುಂಬೈನಲ್ಲಿ ಕೆಲಸದಲ್ಲಿದ್ದರು. ಊರಿಗೆ ಬಂದಿದ್ದ ವೇಳೆ ನಿನ್ನೆ ರಾತ್ರಿ ಸಂಬಂಧಿಗಳಾದ ಯೋಗೀಶ್ ಮತ್ತು ಜೀವನ್ ರ ಜೊತೆಗೆ ಆಸ್ತಿ ವಿಚಾರದಲ್ಲಿ ಚರ್ಚೆ ನಡೆದಿದೆ.
ಈ ವೇಳೆ ಯೋಗೀಶ್ ಮತ್ತು ಜೀವನ್ ಅವರು ಉಮೇಶ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದರು.ಗಂಭೀರವಾಗಿ ಗಾಯಗೊಂಡಿದ್ದ ಉಮೇಶ್ ರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.ಬೆಳ್ತಂಗಡಿ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login