Connect with us

    BELTHANGADI

    ಬೆಳ್ತಂಗಡಿ : ನಿರ್ಮಾಣ ಹಂತದಲ್ಲಿದ್ದ ದೇವಸ್ಥಾನದ ಗೋಡೆ ಕೆಡವಿದ ಕಿಡಿಗೇಡಿಗಳು

    ಪುತ್ತೂರು ಜನವರಿ 21: ಜೀರ್ಣೋದ್ಧಾರ ಹಂತದಲ್ಲಿದ್ದ ದೇವಸ್ಥಾನದ ಗೋಡೆಗಳನ್ನು ಕಿಡಿಗೇಡಿಗಳು ಕೆಡವಿ ಹಾಕಿದ ಘಟನೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಎಂಬಲ್ಲಿ ನಡೆದಿದೆ.


    ಬೆಳ್ತಂಗಡಿ ತಾಲೂಕಿನ ಮುಂಡಾಜೆಯಲ್ಲಿ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ದಾರದ ಕೆಲಸ ನಡೆಯುತ್ತಿದ್ದು, ನಿರ್ಮಾಣ ಹಂತದ ಗೋಡೆಯನ್ನು ಯಾರೋ ಕಿಡಿಗೇಡಿಗಳು ಒಡೆದು ಹಾಕಿದ್ದಾರೆ. ಈ ಹಿನ್ನಲೆ ದೇವಸ್ಥಾನದ ಆಡಳಿತ ಮಂಡಳಿಯಿಂದ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಸ್ಥಳೀಯ ವ್ಯಕ್ತಿ ಫಿಲಿಪ್ ಎಂಬವರ ಮೇಲೆ ಅನುಮಾನ ವ್ಯಕ್ತಪಡಿಸಿ ದೂರು ನೀಡಿದ್ದು, ಫಿಲಿಪ್ ಹಾಗೂ ದೇವಸ್ಥಾನದ ನಡುವೆ ಇರುವ ಜಾಗದ ತಕರಾರು ಹಿನ್ನಲೆಯಲ್ಲಿ ಈ ಕೃತ್ಯ ನಡೆಸಿರುವ ಶಂಕೆ ವ್ಯಕ್ತವಾಗಿದೆ.

    ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷತ್ ಹಾಗೂ ಹಿಂದೂ ಸಂಘಟನೆಗಳು ಒತ್ತಾಯಿಸಿವೆ.

    Share Information
    Advertisement
    Click to comment

    You must be logged in to post a comment Login

    Leave a Reply