BELTHANGADI
ಬೆಳ್ತಂಗಡಿ: ಕಬ್ಬಿಣ ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಓರ್ವ ಸಾವು
ಬೆಳ್ತಂಗಡಿ ಡಿಸೆಂಬರ್ 07: ಕಿಂಡಿ ಅಣೆಕಟ್ಟು ಕಾಮಗಾರಿಗೆ ಕಬ್ಬಿಣವನ್ನು ಸಾಗಿಸುತ್ತಿದ್ದ ಟಾಕ್ಟರ್ ಪಲ್ಟಿಯಾಗಿ ತೋಟಕ್ಕೆ ಬಿದ್ದು ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದು ,ಇಬ್ಬರು ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿಯ ಬಂಗಾರ್ ಪಲ್ಕೆಯಲ್ಲಿ ನಡೆದಿದೆ.
ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ಅಶೋಕ್ ಎಂದು ಗುರುತಿಸಲಾಗಿದೆ. ಮಲವಂತಿಗೆ ಗ್ರಾಮಪಂಚಾಯತ್ ವ್ಯಾಪ್ತಿಯ ದುರ್ಗಮ ಎಳನೀರು ಭಾಗದ ಬಂಗಾರ ಬಳಿಗೆ ಎಂಬಲ್ಲಿ 5 ಕೋ.ರೂ. ವೆಚ್ಚದಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣವಾಗುತ್ತಿದ್ದು ಇದರ ಕಾಮಗಾರಿಗೆಂದು ಕಬ್ಬಿಣದ ಸರಳು ಸಾಗಿಸಲಾಗುತ್ತಿತ್ತು.
ಈ ದಾರಿ ಅತ್ಯಂತ ಕಡಿದಾಗಿದ್ದು ದುರ್ಗಮವಾಗಿದೆ. ಲಾರಿ ಚಾಲಕ ನಿಯಂತ್ರಣ ಕಳೆದುಕೊಂಡ ಟ್ರ್ಯಾಕ್ಟರ್ ಪಲ್ಟಿಯಾಗಿದೆ. ಈ ವೇಳೆ ಚಾಲಕ ಮತ್ತು ಮರ್ತೋರ್ವ ಪ್ರಾಣಾಪಾಯದಿಂದ ಪಾರಾಗಿದ್ದು ಹಿಂಬದಿ ಕುಳಿತಿದ್ದ ಕಾರ್ಮಿಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ಸಾಗಿಸವ ವೇಳೆ ಮೃತಪಟ್ಟಿದ್ದಾರೆ.
You must be logged in to post a comment Login